'ಪಕ್ಷ ಕಟ್ಟಿ ಬೆಳೆಸಿ, ಅರ್ಹತೆ ಹೊಂದಿ ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತಿರುವ ನೂತನ ಸಚಿವರಿಗೆ ಅಭಿನಂದನೆಗಳು'

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ನೂತನ ಸಚಿವ ಸಂಪುಟ ರಚನೆ ಮಾಡುತ್ತಿದ್ದಂತೆಯೇ ಮೂಲ ಬಿಜೆಪಿಗರಲ್ಲಿ ಅಸಮಾಧಾನದ ಕಟ್ಟೆಯೊಡೆಯುತ್ತಿದೆ.
ಎಸ್ ಎ ರಾಮದಾಸ್
ಎಸ್ ಎ ರಾಮದಾಸ್

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ನೂತನ ಸಚಿವ ಸಂಪುಟ ರಚನೆ ಮಾಡುತ್ತಿದ್ದಂತೆಯೇ ಮೂಲ ಬಿಜೆಪಿಗರಲ್ಲಿ ಅಸಮಾಧಾನದ ಕಟ್ಟೆಯೊಡೆಯುತ್ತಿದೆ. 

ಈ ಮಧ್ಯೆ ಸಚಿವ ಸ್ಥಾನದ ಆಕಾಂಕ್ಷಿಯೂ ಆಗಿದ್ದ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌ ಎ ರಾಮದಾಸ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್‌ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ತಮ್ಮ ಪೋಸ್ಟ್‌ನಲ್ಲಿ ಅವರು, ‘ಪಕ್ಷ ಕಟ್ಟಿ ಬೆಳೆಸಿ, ಅರ್ಹತೆ ಹೊಂದಿ ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತಿರುವ ನೂತನ ಸಚಿವರಿಗೆ ಅಭಿನಂದನೆಗಳು. ಕರ್ನಾಟಕವನ್ನು ದೇಶದಲ್ಲಿ ನಂಬರ್‌ 1 ಮಾಡಲು ತಾವೆಲ್ಲ ಶ್ರಮಿಸುತ್ತೀರೆಂದು ನಂಬಿರುತ್ತೇನೆ. ತಮ್ಮೆಲ್ಲರಿಗೂ ತಾಯಿ ಚಾಮುಂಡೇಶ್ವರಿ ಶುಭವನ್ನುಂಟುಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಪಕ್ಷ ಕಟ್ಟಿ ಬೆಳೆಸಿ, ಅರ್ಹತೆ ಹೊಂದಿ ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತಿರುವ ನೂತನ ಸಚಿವರಿಗೆ ಅಭಿನಂದನೆಗಳು’ ಎನ್ನುವ ಶಾಸಕ ರಾಮದಾಸ್‌ ಅವರ ಮಾತು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕೆಲವರನ್ನು ಕುರಿತು ವ್ಯಂಗ್ಯ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com