'ಕ್ಯಾಸಿನೋ, ಜೂಜು, ಬಾರ್, ಹುಕ್ಕಾ, ಚೆಂಡು ಹೂ! ಇವೆಲ್ಲ ಕೊಳಕು ನಾಲಿಗೆಯ ಸಿಟಿ ರವಿಗೆ ಬಹು ಪ್ರಿಯವಾದವು!'

ಬಿಜೆಪಿ ಮುಖಂಡ ಸಿ.ಟಿ.ರವಿಯವರ ನೆಹರೂ ಹುಕ್ಕಾ ಬಾರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದೆ. ಕ್ಯಾಸಿನೋ, ಜೂಜು, ಬಾರ್, ಹುಕ್ಕಾ, ಚೆಂಡು ಹೂ, ಇವೆಲ್ಲ ಕೊಳಕು ನಾಲಿಗೆಯ ಸಿಟಿ ರವಿಗೆ ಬಹು ಪ್ರಿಯವಾದವು ಎಂದು ಲೇವಡಿ ಮಾಡಿದೆ.
ಸಿಟಿ ರವಿ
ಸಿಟಿ ರವಿ

ಬೆಂಗಳೂರು: ಬಿಜೆಪಿ ಮುಖಂಡ ಸಿ.ಟಿ.ರವಿಯವರ ನೆಹರೂ ಹುಕ್ಕಾ ಬಾರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದೆ. ಕ್ಯಾಸಿನೋ, ಜೂಜು, ಬಾರ್, ಹುಕ್ಕಾ, ಚೆಂಡು ಹೂ, ಇವೆಲ್ಲ ಕೊಳಕು ನಾಲಿಗೆಯ ಸಿಟಿ ರವಿಗೆ ಬಹು ಪ್ರಿಯವಾದವು ಎಂದು ಲೇವಡಿ ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಕೊಳಕು ನಾಲಿಗೆಯ ಸಿಟಿ ರವಿ ಹಿಂದೆ ಪ್ರವಾಸೋದ್ಯಮ ಸಚಿವರಾಗಿದ್ದಾಗ ರಾಜ್ಯದಲ್ಲಿ ಕ್ಯಾಸಿನೋ ತೆರೆಯಲು ಮುಂದಾಗಿದ್ದರು. ಸಿಟಿ ರವಿ ಅವರೇ, ಆ ನಿಮ್ಮ ಮಹತ್ವಾಕಾಂಕ್ಷಿ ಯೋಜನೆಗೆ 'ದೀನದಯಾಳ್ ಕ್ಯಾಸಿನೋ ಯೋಜನೆ' ಎಂದು ನಾಮಕರಣ ಮಾಡ್ತಿದ್ರಾ ಎಂದು ಪ್ರಶ್ನಿಸಿದೆ.

ಇಂದಿರಾ ಕ್ಯಾಂಟಿನ್ ಮಾದರಿಯಾದರೂ ಕಳಪೆ ಗುಣಮಟ್ಟದ 'ದೀನ್ ದಯಾಳ್ ಉಪಾಧ್ಯಾಯ ರಸೊಯ್' ಎಂಬ ಕ್ಯಾಂಟೀನ್ ತೆರೆದಿದೆ ಮಧ್ಯಪ್ರದೇಶದ ಬಿಜೆಪಿ ಸರ್ಕಾರ. ಆ ಯೋಜನೆಯ ಹಣ ದೀನದಯಾಳ್ ಆಸ್ತಿ ಮಾರಿದ್ದೇ? ಅಥವಾ ಆತ ಮಾಜಿ ಪ್ರಧಾನಿಯೇ? ಸ್ವತಂತ್ರ ಹೊರಾಟಗಾರನೇ? ದೇಶಕ್ಕೆ ಒಂದು ಹನಿ ಕೊಡುಗೆಯನ್ನೂ ಕೊಡದ ಆತನ ಹೆಸರೇಕೆ  ಇಟ್ಟಿದ್ದಾರೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com