ನಿನ್ ಯೋಗ್ಯತೆಗಿಷ್ಟು ಬೆಂಕಿ ಹಾಕಾ...: ಬಿಜೆಪಿ ಸಂಸದ ಜಿಎಸ್ ಬಸವರಾಜು, ಗುಬ್ಬಿ ಶಾಸಕ ಶ್ರೀನಿವಾಸ್ ವಾಕ್ಸಮರ

ಅನುದಾನದ ವಿಚಾರಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿಯೇ ಬಿಜೆಪಿ ಸಂಸದ ಜಿಎಸ್ ಬಸವರಾಜು ಮತ್ತು ಗುಬ್ಬಿ ಶಾಸಕ ಶ್ರೀನಿವಾಸ್ ನಡುವೆ ತೀವ್ರ ವಾಕ್ಸಮರವೇ ನಡೆದಿದೆ.
ಸಂಸದ ಜಿ.ಎಸ್ ಬಸವರಾಜು-ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್
ಸಂಸದ ಜಿ.ಎಸ್ ಬಸವರಾಜು-ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್

ತುಮಕೂರು: ಅನುದಾನದ ವಿಚಾರಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿಯೇ ಬಿಜೆಪಿ ಸಂಸದ ಜಿಎಸ್ ಬಸವರಾಜು ಮತ್ತು ಗುಬ್ಬಿ ಶಾಸಕ ಶ್ರೀನಿವಾಸ್ ನಡುವೆ ತೀವ್ರ ವಾಕ್ಸಮರವೇ ನಡೆದಿದೆ.

ತುಮಕೂರು ಜಿಲ್ಲೆಗೆ 550 ಕೋಟಿ ಅನುದಾನದ ವಿಚಾರದಲ್ಲಿ ತುಮಕೂರು ಸಂಸದ ಜಿ.ಎಸ್ ಬಸವರಾಜು ಅವರಿಗೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಅವಾಜ್ ಹಾಕಿದ್ದಾರೆ. ಗುಬ್ಬಿ ತಾಲೂಕಿನ ಚೇಳೂರು ಸಮೀಪದ ಸಿ.ನಂದಿಹಳ್ಳಿ ಗ್ರಾಮದಲ್ಲಿ ನಡೆದ ಬೆಸ್ಕಾಂ ವಿದ್ಯುತ್ ಎಂಎಸ್‍ಎಸ್ ಸ್ಟೇಷನ್ ಉದ್ಘಾಟನೆಯ  ವೇಳೆ ಇಬ್ಬರು ನಾಯಕರ ನಡುವೆ ಜಟಾಪಟಿ ನಡೆದಿದೆ. 

ಚೇಳೂರು ಹೋಬಳಿಯಲ್ಲಿ ಚೆಕ್ ಡ್ಯಾಂ ನಿರ್ಮಿಸಲು ಕೇಂದ್ರ ಸರ್ಕಾರ 500 ಕೋಟಿ ಮೀಸಲಿಟ್ಟಿದೆ ಎಂದು ಸಭೆಯಲ್ಲಿ ಜಿಎಸ್ ಬಸವರಾಜು ಹೇಳಿದರು. ಈ ವೇಳೆ ರೊಚ್ಚಿಗೆದ್ದ ಗುಬ್ಬಿ ಶ್ರೀನಿವಾಸ್, 550 ಕೋಟಿ ನಿಮ್ ತಾತ ತಂದಿದ್ನಾ..? 550 ಕೋಟಿ ಎಲ್ ತಂದಿದ್ದೀರಿ ತೋರಿಸ್ರಿ..ರೈತರಿಗೆ ಸುಳ್ಳು ಹೇಳ್ತಿಯಾ, ನಿಮ್  ಯೋಗ್ಯತೆಗೆ ಇಷ್ಟು ಬೆಂಕಿ ಹಾಕ.. ಸುಳ್ಳು ಯಾಕೆ ಬೊಗಳುತ್ತೀಯಾ..? ವಯಸ್ಸಾಗಿದೆ ಈಗಲಾದ್ರೂ ಸುಳ್ಳು ಹೇಳೋದನ್ನ ನಿಲ್ಲಿಸು ಎಂದು ಏಕವಚನದಲ್ಲಿಯೇ ಮಾತಿಗಿಳಿದರು.

ಈ ವೇಳೆ ಇಲ್ಲದ ವಿಚಾರವನ್ನು ಮಾತಾಡಬೇಡ ನೀನು. ನೀನು ಅಯೋಗ್ಯ ನನ್ಮಗ ಎಂದು ಬಸವರಾಜು ಕಿಡಿಕಾರಿದರು. ಇಬ್ಬರೂ ನಾಯಕರು ಬೈದಾಡಿಕೊಂಡ ವಿಡಿಯೋ ಇದೀಗ ರಾಜಕೀಯ ವಲಯದಲ್ಲಿ ವೈರಲ್ ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com