ಬೆಂಗಳೂರು: ಸಿದ್ದರಾಮಯ್ಯನವರೇ ಕಳೆದ ಬಾರಿ ನೀವು ಪ್ರಕೃತಿ ಚಿಕಿತ್ಸೆಗೆ ಹೋದಾಗ ಮೈತ್ರಿ ಸರ್ಕಾರದ ಪತನಕ್ಕೆ ಮುಹೂರ್ತ ಇಟ್ಟಿದ್ದಿರಿ. ಆದರೆ ಈ ಬಾರಿ ನೀವು ಸದ್ದೇ ಮಾಡದೆ ರಹಸ್ಯ ಕಾರ್ಯಾಚರಣೆ ರೂಪಿಸಿರುವ ಹಾಗಿದೆ. ನಿಮ್ಮ ಭ್ರಷ್ಟಾಧ್ಯಕ್ಷರಿಗೆ ಖೆಡ್ಡಾ ತಯಾರಾಗಿದೆಯಾ? ಎಂದು ಬಿಜೆಪಿ ಟ್ವೀಟ್ ಮೂಲಕ ಕೆಣಕಿದೆ.
ಹತ್ತು ದಿನಗಳ ಕಾಲ ಪ್ರಕೃತಿ ಚಿಕಿತ್ಸೆ ಪಡೆದು ಸ್ವಸ್ಥರಾಗಿ ಮರಳುತ್ತಿರುವ ಸಿದ್ದರಾಮಯ್ಯ ಅವರಿಗೆ ಸ್ವಾಗತ. ನಿಮ್ಮಅನುಪಸ್ಥಿತಿಯಿಂದ ರಾಜ್ಯ ಕಾಂಗ್ರೆಸ್ ಪಕ್ಷದ ಒಳಜಗಳ ರಂಗು ಕಳೆದುಕೊಂಡಿತ್ತು. ನಿಮ್ಮ ಭ್ರಷ್ಟಾಧ್ಯಕ್ಷ ರ ವಿರುದ್ಧ ಸೆಣೆಸುವುದಕ್ಕೆ ಯಾವ ರೀತಿ ಆಯುಧ ಹರಿತ ಮಾಡಿಕೊಂಡಿದ್ದೀರಿ ಎಂಬ ಕುತೂಹಲ ರಾಜ್ಯಕ್ಕಿದೆ, ತಿಳಿಸುವಿರಾ? ಎಂದು ಮತ್ತೊಂದು ಟ್ವೀಟ್ ಮಾಡಿದೆ.
ಪ್ರಕೃತಿ ಚಿಕಿತ್ಸೆ ನೆಪದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರದ್ದೇ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಖೆಡ್ಡಾಕ್ಕೆ ಕೆಡವಲು ತಂತ್ರರೂಪಿಸಿದ್ದಾರೆ ಎಂದು ರಾಜ್ಯ ಬಿಜೆಪಿ ತಿಳಿಸಿದೆ.
Advertisement