ಡಿ.10ರ ಬಳಿಕ ರಾಜ್ಯ ಸಚಿವ ಸಂಪುಟದಲ್ಲಿ ಭಾರೀ ಬದಲಾವಣೆ: ಯತ್ನಾಳ್ ಹೊಸ ಬಾಂಬ್

ಡಿ.10ರ ಬಳಿಕ ಸಚಿವ ರಾಜ್ಯ ಸಂಪುಟದಲ್ಲಿ ಭಾರೀ ಬದಲಾವಣೆಯಾಗಲಿದೆ. ಆದರೆ, ಮುಖ್ಯಮಂತ್ರಿ ಬದಲಾಗುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ.
ಶಾಸಕ ಬಸನಗೌಡ ಪಾಟೀಲ ಯತ್ನಾಳ
ಶಾಸಕ ಬಸನಗೌಡ ಪಾಟೀಲ ಯತ್ನಾಳ

ಬೆಂಗಳೂರು: ಡಿ.10ರ ಬಳಿಕ ಸಚಿವ ರಾಜ್ಯ ಸಂಪುಟದಲ್ಲಿ ಭಾರೀ ಬದಲಾವಣೆಯಾಗಲಿದೆ. ಆದರೆ, ಮುಖ್ಯಮಂತ್ರಿ ಬದಲಾಗುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸಚಿವರು ಬೆಳಗಾದರೆ ಮುಖ್ಯಮಂತ್ರಿಗಳ ಜತೆ ಓಡಾಡಿಕೊಂಡು ಇರುತ್ತಾರೆ. ಸಚಿವರು ಜಿಲ್ಲೆಗಳಿಗೆ ಹೋಗಿ ಕೆಲಸ ಮಾಡಲಿಲ್ಲವೆಂದರೆ ಮುಂದೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕೆಲ ಸಚಿವರು ಮುಖ್ಯಮಂತ್ರಿಗಳ ಜೊತೆಗೆ ಸುತ್ತಾಡುತ್ತಲೇ ಇದ್ದಾರೆ. ಶಾಸಕರಿಗೆ ಸಮಯ ನೀಡುತ್ತಿಲ್ಲ. ಅಂತಹವರನ್ನು ಡಿಸೆಂಬರ್ 10ರ ಬಳಿಕ ಸಂಪುಟದಿಂದಲೇ ಕೈ ಬಿಡುವ ಚಿಂತನೆಗಳು ನಡೆದಿವೆ. ಎಲ್ಲಾ ಸಚಿವರ ಕೈಬಿಡುವ ಕುರಿತು ಚಿಂತನೆಗಳು ನಡೆದಿಲ್ಲ. ಕೆಲಸ ಮಾಡದ ಸಚಿವರ ಕೈಬಿಡಲು ಚಿಂತನೆಗಳು ನಡೆದಿವೆ. ಮುಖ್ಯಮಂತ್ರಿಗಳು ಬದಲಾವಣೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಯತ್ನಾಳ್ ಅವರ ಈ ಹೇಳಿಕೆಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿಯವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ.

ಯತ್ನಾಳ್ ಅವರಿಗೆ ಗೌಪ್ಯ ಮಾಹಿತಿಗಳು ಬಂದಿರಬಹುದು. ರಾಜ್ಯಕ್ಕೆ ವಾಪಸ್ಸಾದ ಬಳಿಕ ನಾನು ಅವರೊಂದಿಗೆ ಮಾತುಕತೆ ನಡೆಸುತ್ತೇನೆಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com