ಮೈಸೂರು: ಡಿಸೆಂಬರ್ 10 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗಾಗಿ ಮೈಸೂರು- ಚಾಮರಾಜನಗರ ಹಾಗೂ ಮಂಡ್ಯ ಮತ ಕ್ಷೇತ್ರದಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಚಾರ ನಡೆಸಿದರು.
ಮೊದಲಿಗೆ ಮಂಡ್ಯದಲ್ಲಿ ಸ್ಥಳೀಯ ಸಂಸ್ಥೆ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪ, ತಾನು ಮಂಡ್ಯದ ಮಗ ಎಂಬ ಹೆಮ್ಮೆಯಿದೆ ಎಂದರು.
ಬಿಜೆಪಿ ಅಭ್ಯರ್ಥಿ ಎಂಸಿ ಮಂಜು ಪರವಾಗಿ ಪ್ರಚಾರ ನಡೆಸಿದ ಯಡಿಯೂರಪ್ಪ, ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಕ್ಕರೂ ಅವರು ಗೆಲ್ಲುತ್ತಾರೆ ಎಂಬ ಊಹೆ ಇತ್ತು. ಆದರೆ, ಅದು ಇದೀಗ ಬದಲಾಗಿದೆ. ರಾಜ್ಯದಲ್ಲಿ ಒಂದು ಅಥವಾ ಇಬ್ಬರು ಅಭ್ಯರ್ಥಿಗಳು ಗೆಲ್ಲುತ್ತಾರೆಂಬ ವಿಶ್ವಾಸ ಹಳೆಯ ಪಕ್ಷಕ್ಕೆ ಇಲ್ಲ. 26 ರಾಜ್ಯಗಳಲ್ಲಿ ಉಸಿರಾಟವನ್ನು ಕಾಂಗ್ರೆಸ್ ನಿಲ್ಲಿಸಿದೆ. ಮುಂದಿನ ಚುನಾವಣೆಯೊಳಗೆ ಕರ್ನಾಟಕದಲ್ಲಿಯೂ ಉಸಿರಾಡುವುದನ್ನು ನಿಲ್ಲಿಸಲಿದೆ ಎಂದರು.
ಮೈಸೂರಿನ ರಾಜೇಂದ್ರ ಕಾನ್ವೆಷನ್ ಹಾಲ್ ಹಾಗೂ ಚಾಮರಾಜನಗರ ಜಿಲ್ಲೆಯ ಸಂತೇಮಾರನಹಳ್ಳಿಯಲ್ಲಿ ಸಭೆ ನಡೆಸಿದ ಯಡಿಯೂರಪ್ಪ, ಮೈಸೂರು- ಚಾಮರಾಜನಗರ ಮತ ಕ್ಷೇತ್ರದ ಅಭ್ಯರ್ಥಿ ರಘು ಕೌಟಿಲ್ಯ ಅವರನ್ನು ಬೆಂಬಲಿಸುವಂತೆ ಕೋರಿದರು. ಪಕ್ಷದ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಗ್ರಾಮ ಪಂಚಾಯಿತಿ ಸದಸ್ಯರಲ್ಲಿ ಅವರು ಮನವಿ ಮಾಡಿದರು.
Advertisement