ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸಾವಿನ ತನಿಖೆಯಾಗಬೇಕು: ಸದನದಲ್ಲಿ ಸಚಿವರ ಒತ್ತಾಯ

ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ.
ಕೆ.ಎಸ್ ಈಶ್ವರಪ್ಪ
ಕೆ.ಎಸ್ ಈಶ್ವರಪ್ಪ

ಬೆಳಗಾವಿ: ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ.

ವಿಧಾನಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು, ಅಪಘಾತದ ಬಗ್ಗೆ ತನಿಖೆ ಆಗಬೇಕು ಇಲ್ಲಂದ್ರೆ ಪ್ರಪಂಚದಲ್ಲಿ ಅಸಮಾಧಾನ ಹಾಗೆ ಉಳಿಯುತ್ತದೆ. ಕೆಲವರು ಸಿಡಿಎಸ್ ನಿಧನದ ಬಗ್ಗೆ ವಿಕೃತ ಹೇಳಿಕೆ ಟ್ವೀಟ್ ಮಾಡಿದ್ದಾರೆ. ಇದನ್ನು ಸಿಎಂ ಬಸವರಾಜ ಬೊಮ್ಮಾಯಿ ಖಂಡನೆ ಮಾಡಿದ್ದಾರೆ ಎಂದರು.

ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು. ಈ ಬಗ್ಗೆ ಸಂಶಯ ಇದೆ. ರಷ್ಯನ್ ನಿರ್ಮಿಸಿದ ಹೆಲಿಕಾಪ್ಟರ್ ಅದು. ಅಪಘಾತದ ಕಾರಣ ಏನು ಎಂಬುವುದು ತಿಳಿಯಬೇಕು ಎಂದು ಸದನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದರು.

ಅಡ್ವಾನ್ಸ್ ಇಂಜಿನ್ ಹೆಲಿಕಾಪ್ಟರ್ ಅಪಘಾತದಿಂದ ಸತ್ತಿದ್ದಾರೆ ಎಂಬುವುದೇ ಆಶ್ಚರ್ಯ ಎಂದ ಅವರು, ನಾನು ಯಾರ ಕೈವಾಡ ಇದೆ ಎಂಬ ಶಂಕೆ ಪಡಲ್ಲ ಆದರೆ ಹೇಗೆ ಸತ್ತರು, ಅಪಘಾತ ಹೇಗಾಯಿತು ಎಂಬುವುದು ನಿಗೂಢವಾಗಿದೆ. ಈ ಬಗ್ಗೆ ಜನರಿಗೆ ಗೊತ್ತಾಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com