2 ಪವರ್‌ ಸೆಂಟರ್‌ ವಿರುದ್ಧ ದಿಕ್ಕಿಗೆ ಮುಖ ಮಾಡಿ ನಿಂತಿದೆ: ಕನಕಪುರ ಬಂಡೆ ಪುಡಿಯಾಗುವುದು ನಿಶ್ಚಿತವೇ?

'ಪರಿಷತ್‌ ಚುನಾವಣೆಯಲ್ಲಿ ಹಿಂದಿನದ್ದಕಿಂತ ಕೆಲವು ಸ್ಥಾನ ಕಳೆದುಕೊಂಡರೂ ರಾಜ್ಯವನ್ನೇ ಗೆದ್ದ ಸಂಭ್ರಮ ತೋರಿಸಿದ ಕಾಂಗ್ರೆಸ್ ಪರಿಸ್ಥಿತಿ ಈಗ ಅಯೋಮಯವಾಗಿದೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Updated on

ಬೆಂಗಳೂರು: ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮೂಹಿಕ ನಾಯಕತ್ವದಲ್ಲಿಯೇ ನಂಬಿಕೆ ಇರಿಸಿದೆ. ಹೀಗಾಗಿ, ಮುಂದಿನ  ವಿಧಾನಸಭಾ ಚುನಾವಣೆಯನ್ನೂ ಸಾಮೂಹಿಕ ನಾಯಕತ್ವದಲ್ಲಿಯೇ ಎದುರಿಸಲಾಗುತ್ತದೆ’ ಎಂದಿರುವ ಸಿದ್ದರಾಮಯ್ಯ ಅವರ ಮಾತಿಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, 'ಪರಿಷತ್‌ ಚುನಾವಣೆಯಲ್ಲಿ ಹಿಂದಿನದ್ದಕಿಂತ ಕೆಲವು ಸ್ಥಾನ ಕಳೆದುಕೊಂಡರೂ ರಾಜ್ಯವನ್ನೇ ಗೆದ್ದ ಸಂಭ್ರಮ ತೋರಿಸಿದ ಕಾಂಗ್ರೆಸ್ ಪರಿಸ್ಥಿತಿ ಈಗ ಅಯೋಮಯವಾಗಿದೆ. ಎರಡು ಪವರ್‌ ಸೆಂಟರ್‌ ವಿರುದ್ಧ ದಿಕ್ಕಿಗೆ ಮುಖ ಮಾಡಿ ನಿಂತಿದೆ. ನಾಯಕತ್ವದ ಕುರಿತು ಶೀತಲ ಸಮರ ಆರಂಭವಾಗಿದೆ' ಎಂದು ಹೇಳಿದೆ.

'ಕನಕಪುರ ಬಂಡೆ ಪುಡಿಯಾಗುವುದು ನಿಶ್ಚಿತವೇ? ಡಿಕೆಶಿಯ ವೇಗವನ್ನು ಸಿದ್ದರಾಮಯ್ಯಗೆ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಡಿಕೆಶಿ ಅವರು ತಾನು ಸಿಎಂ ಆಗುವ ಕನಸಿಗೆ ಪೂರಕವಾಗಿ ತಮ್ಮ ನಿಷ್ಠಾವಂತರ ಪಡೆ ಕಟ್ಟುತ್ತಿದ್ದಾರೆ. ಇದು ತನಗೆ ಮಗ್ಗುಲ ಮುಳ್ಳಾಗಬಹುದು ಎಂಬ ಭಯದಿಂದ ಸಿದ್ದರಾಮಯ್ಯ ತನ್ನ ಆಪ್ತರ ಮೂಲಕ ಡಿಕೆಶಿ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ' ಎಂದು ಆರೋಪಿಸಿರುವ ಬಿಜೆಪಿ, ಗೆಲ್ಲುವವರ್ಯಾರು? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com