ಬೆಂಗಳೂರು: ಎರಡು ಮೂರು ಬಾರಿ ಗೆದ್ದಿರುವ ಶಾಸಕರು ಬಿಜೆಪಿ ಅಧಿಕಾರಾವಧಿಯುದ್ದಕ್ಕೂ ಮಂತ್ರಿ ಸ್ಥಾನದ ಆಕಾಂಕ್ಷೆಯನ್ನು ಹೊತ್ತುಕೊಂಡಿರುತ್ತಾರೆ ಎಂದು ಹೇಳಿರುದ ಸಿ.ಎಂ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ರಾಜ್ಯದಲ್ಲಿ ಗುಜರಾತ್ ಮಾದರಿಯ ಸಂಪುಟ ಪುನರ್ ರಚನೆಯ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ.
ಕಳೆದ ಮೂರು ಅವಧಿಗೆ ಸಚಿವರಾಗಿದ್ದವರು ತಾವಾಗಿಯೇ ಪದವಿಯಿಂದ ಕೆಳಕ್ಕಿಳಿದು ಪಕ್ಷದ ಬಲವರ್ಧನೆಯ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಆ ಮೂಲಕ ಇತರ ಆಕಾಂಕ್ಷಿಗಳಿಗೆ ಅವಕಾಶವಾಗುತ್ತದೆ ಎಂದು ಖುದ್ದು ಸಚಿವ ಸ್ಥಾನ ಆಕಾಂಕ್ಷಿಯಾಗಿರುವ ರೇಣುಕಾಚಾರ್ಯ ಹೇಳಿದ್ದಾರೆ.
Advertisement