ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ: ಸಿದ್ದರಾಮಯ್ಯ
ಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ನಾನು ಈವರೆಗೆ ಗೋಮಾಂಸವನ್ನು ತಿಂದಿಲ್ಲ. ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.
Published: 13th January 2021 04:48 PM | Last Updated: 13th January 2021 04:58 PM | A+A A-

ಸಿದ್ದರಾಮಯ್ಯ
ಬೆಂಗಳೂರು: ಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ನಾನು ಈವರೆಗೆ ಗೋಮಾಂಸವನ್ನು ತಿಂದಿಲ್ಲ. ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿವರು ಒಂದು ಕಡೆ ವಿಶ್ವಮಾನವರಾಗಿ ಅಂತನೂ ಹೇಳ್ತಾರೆ, ಇನ್ನೊಂದು ಕಡೆ ಕುರಿ, ಕೋಳಿ, ಗೋಮಾಂಸ ತಿನ್ನುವವರ ವಿರುದ್ಧ ದ್ವೇಷವನ್ನೂ ಕಾರುತ್ತಾರೆ. ವಿಶ್ವಮಾನವನಾಗುವುದು ಎಂದರೆ ಪ್ರತಿ ವ್ಯಕ್ತಿಯ ಸಂಸ್ಕೃತಿ, ಆಹಾರ, ಆಚರಣೆಗಳನ್ನು ಗೌರವಿಸಿ, ಅವರಿದ್ದಂತೆ ಅವರನ್ನು ಒಪ್ಪಿಕೊಳ್ಳುವುದು ಎಂದು ಹೇಳಿದ್ದಾರೆ.
ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಅವರ ಬಲದಿಂದ ಅಧಿಕಾರ ಅನುಭವಿಸುತ್ತಿರುವ ಯಡಿಯೂರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ನಾಯಕರಿಲ್ಲ ಎಂದು ಹೇಳುತ್ತಿರುವುದು ತಮಾಷೆಯಾಗಿದೆ. ಸ್ವಂತಬಲದಲ್ಲಿ ಚುನಾವಣೆ ಗೆದ್ದು ಪೂರ್ಣಾವಧಿ ಸರ್ಕಾರ ನಡೆಸಿದ್ದು ಕಾಂಗ್ರೆಸ್ ಪಕ್ಷ. ಅವರೇನಾದರೂ ಒಂದೈದು ಪೂರ್ತಿ ವರ್ಷ ಮುಖ್ಯಮಂತ್ರಿಯಾಗಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ಕಳೆದ 48 ದಿನಗಳಿಂದ ದೆಹಲಿಯಲ್ಲಿ ರೈತರು ಮಳೆ, ಚಳಿ, ಹಸಿವು ಯಾವುದನ್ನೂ ಲೆಕ್ಕಿಸದೆ ಬೀದಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಾ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹಠಮಾರಿ ಧೋರಣೆಯೇ ರೈತರ ಎಲ್ಲ ಕಷ್ಟ-ನಷ್ಟಗಳಿಗೆ ನೇರ ಕಾರಣ.
ಸುಪ್ರೀಂ ಕೋರ್ಟ್ ಕೇಂದ್ರದ ನೂತನ ಕೃಷಿ ಕಾಯ್ದೆಗಳಿಗೆ ತಡೆ ನೀಡಿದೆಯೆಂದರೆ ಆ ಮಸೂದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದರ್ಥ. ಅದೇ ನ್ಯಾಯಾಲಯ ರೈತರಿಗೆ ಪ್ರತಿಭಟನೆ ಮುಂದುವರೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದೆ ಎಂದರೆ ಅವರ ಬೇಡಿಕೆಗಳು ನ್ಯಾಯಬದ್ಧವಾಗಿವೆ ಎಂದರ್ಥ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ ಎಂದು @BSYBJP ಹೇಳಿದ್ದಾರೆ. ಆದರೆ ನಾನು ಈವರೆಗೆ ಗೋಮಾಂಸವನ್ನು ತಿಂದಿಲ್ಲ. ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ. 6/6#Mysuru
— Siddaramaiah (@siddaramaiah) January 13, 2021
ಬಿಜೆಪಿವರು ಒಂದು ಕಡೆ ವಿಶ್ವಮಾನವರಾಗಿ ಅಂತನೂ ಹೇಳ್ತಾರೆ, ಇನ್ನೊಂದು ಕಡೆ ಕುರಿ, ಕೋಳಿ, ಗೋಮಾಂಸ ತಿನ್ನುವವರ ವಿರುದ್ಧ ದ್ವೇಷವನ್ನೂ ಕಾರುತ್ತಾರೆ. ವಿಶ್ವಮಾನವನಾಗುವುದು ಎಂದರೆ ಪ್ರತಿ ವ್ಯಕ್ತಿಯ ಸಂಸ್ಕೃತಿ, ಆಹಾರ, ಆಚರಣೆಗಳನ್ನು ಗೌರವಿಸಿ, ಅವರಿದ್ದಂತೆ ಅವರನ್ನು ಒಪ್ಪಿಕೊಳ್ಳುವುದು. 5/6#Mysuru
— Siddaramaiah (@siddaramaiah) January 13, 2021
ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಅವರ ಬಲದಿಂದ ಅಧಿಕಾರ ಅನುಭವಿಸುತ್ತಿರುವ @BSYBJP ಅವರು ಕಾಂಗ್ರೆಸ್ ಪಕ್ಷಕ್ಕೆ ನಾಯಕರಿಲ್ಲ ಎಂದು ಹೇಳುತ್ತಿರುವುದು ತಮಾಷೆಯಾಗಿದೆ. ಸ್ವಂತಬಲದಲ್ಲಿ ಚುನಾವಣೆ ಗೆದ್ದು ಪೂರ್ಣಾವಧಿ ಸರ್ಕಾರ ನಡೆಸಿದ್ದು ಕಾಂಗ್ರೆಸ್ ಪಕ್ಷ. ಅವರೇನಾದರೂ ಒಂದೈದು ಪೂರ್ತಿ ವರ್ಷ ಮುಖ್ಯಮಂತ್ರಿಯಾಗಿದ್ದಾರಾ? 4/6#Mysuru
— Siddaramaiah (@siddaramaiah) January 13, 2021
ಕಳೆದ 48 ದಿನಗಳಿಂದ ದೆಹಲಿಯಲ್ಲಿ ರೈತರು ಮಳೆ, ಚಳಿ, ಹಸಿವು ಯಾವುದನ್ನೂ ಲೆಕ್ಕಿಸದೆ ಬೀದಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಾ ಬಂದಿರುವ @narendramodi ಅವರ ಹಠಮಾರಿ ಧೋರಣೆಯೇ ರೈತರ ಎಲ್ಲ ಕಷ್ಟ-ನಷ್ಟಗಳಿಗೆ ನೇರ ಕಾರಣ. 3/6#Mysuru
— Siddaramaiah (@siddaramaiah) January 13, 2021
ಸುಪ್ರೀಂ ಕೋರ್ಟ್ ಕೇಂದ್ರದ ನೂತನ ಕೃಷಿ ಕಾಯ್ದೆಗಳಿಗೆ ತಡೆ ನೀಡಿದೆಯೆಂದರೆ ಆ ಮಸೂದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದರ್ಥ. ಅದೇ ನ್ಯಾಯಾಲಯ ರೈತರಿಗೆ ಪ್ರತಿಭಟನೆ ಮುಂದುವರೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದೆ ಎಂದರೆ ಅವರ ಬೇಡಿಕೆಗಳು ನ್ಯಾಯಬದ್ಧವಾಗಿವೆ ಎಂದರ್ಥ. 2/6#Mysuru
— Siddaramaiah (@siddaramaiah) January 13, 2021