ಸಂಪುಟ ಪುನಾರಚನೆಯ ಚರ್ಚೆ ಪ್ರಸ್ತಾಪವಿಲ್ಲ: ಸಿಎಂ ಯಡಿಯೂರಪ್ಪ

ದೆಹಲಿ ಭೇಟಿ ಕುರಿತು ಖಾತರಿಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಇದೇ ವೇಳೆ ತಮ್ಮ ಮುಂದೆ ಸಂಪುಟ ಪುನಾರಚನೆಯ ಚರ್ಚೆ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ದೆಹಲಿ ಭೇಟಿ ಕುರಿತು ಖಾತರಿಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಇದೇ ವೇಳೆ ತಮ್ಮ ಮುಂದೆ ಸಂಪುಟ ಪುನಾರಚನೆಯ ಚರ್ಚೆ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶುಕ್ರವಾರ ದೆಹಲಿಗೆ ಹೋಗುತ್ತಿದ್ದು, ದೆಹಲಿಯಲ್ಲಿ ಪ್ರಧಾನಿಗಳು ಸೇರಿದಂತೆ ಕೇಂದ್ರದ ಅನೇಕ‌ ಮಂತ್ರಿಗಳನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ, ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡುತ್ತೇನೆಂದು ಹೇಳಿದ್ದಾರೆ. 

ರಾಜ್ಯದಲ್ಲಿ ಸ್ಥಗಿತಗೊಂಡಿರುವ ನೀರಾವರಿ ಯೋಜನೆಗಳ ಬಗ್ಗೆ ಪ್ರಧಾನಿಯವರಿಗೆ ಮನವರಿಕೆ ಮಾಡುತ್ತೇನೆ. ಪ್ರಧಾನಿ ಮೋದಿ ಸಹ ಭೇಟಿಯಾಗುವುದಾಗಿ ಹೇಳಿದ್ದು, ಸಮಯ ಕೊಡಲಿದ್ದಾರೆ.ಬೇಟಿ ಮುಗಿಸಿ ನಾಡಿದ್ದು ಶನಿವಾರ ರಾಜ್ಯಕ್ಕೆ ಹಿಂದಿರುಗುತ್ತೇನೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಸಂಪುಟ ಪುನಾರಚನೆ ಕುರಿತು ಮಾತನಾಡಿರುವ ಅವರು, ಸಂಪುಟ ಪುನಾರಚನೆ ಬಗ್ಗೆ ಯಾವುದೇ ರೀತಿಯ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ಒಂದು ವೇಳೆ ದೆಹಲಿಯಲ್ಲಿ ಅದರ ಬಗ್ಗೆ ಚರ್ಚೆಯಾದರೆ ನೋಡೋಣ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com