ಸಿಎಂ ರೇಸ್‌ನಲ್ಲಿ ನಾನು ಮುಂಚೂಣಿಯಲ್ಲಿರುವೆ: ಸಚಿವ ಉಮೇಶ್ ಕತ್ತಿ

ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ನಾನು ಮುಂಚೂಣಿಯಲ್ಲಿರುವೆ ಎಂದು ಬಿಜೆಪಿ ಹಿರಿಯ ನಾಯಕ, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೇಳಿದ್ದಾರೆ.
ಉಮೇಶ್ ಕತ್ತಿ
ಉಮೇಶ್ ಕತ್ತಿ
Updated on

ಬೆಳಗಾವಿ: ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ನಾನು ಮುಂಚೂಣಿಯಲ್ಲಿರುವೆ ಎಂದು ಬಿಜೆಪಿ ಹಿರಿಯ ನಾಯಕ, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೇಳಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಿರಿತನವಿದೆ. ಕಳಂಕರಹಿತನಾಗಿರುವೆ. ನಸೀಬು ಗಟ್ಟಿ ಇದ್ದರೆ ಮತ್ತು ಪಕ್ಷದ ಹೈಕಮಾಂಡ್ ತೀರ್ಮಾನಿಸಿದರೆ ಜವಾಬ್ದಾರಿ ನಿರ್ವಹಿಸುವೆ. ಆದರೆ, ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಮುಖ್ಯಮಂತ್ರಿಗಳು ಇದ್ದಾರೆ. ಒಳ್ಳೆಯ ಸರ್ಕಾರ ನಡೆಯುತ್ತಿದೆ. ಕಳೆದ ವರ್ಷದಿಂದ ಸಿಎಂ ಬದಲಾವಣೆ ಕೂಗು ಇದ್ದೇ ಇದೆ. ಆ ಕೂಗನ್ನು ಯಾರು ಹಾಕುತ್ತಿದ್ದಾರೆಯೋ ಗೊತ್ತಿಲ್ಲ. ಆ ಬಗ್ಗೆ ನಾನೇನು ಪ್ರತಿಕ್ರಿಯಿಸುವುದಿಲ್ಲ. ಆದರೆ ಸಿಎಂ ಹುದ್ದೆ ಖಾಲಿಯಾದರೆ ಮುಂದಿನ ಸಾಲಿನಲ್ಲಿ ನಾನಿದ್ದೇನೆ. ಸಿಎಂ ಸ್ಥಾನ ಬದಲಾವಣೆ ಆದರೆ, ನಂದೇ ಮುಂದಿನ ನಂಬರ್ ಇದೆ ಎಂದು ತಿಳಿಸಿದ್ದಾರೆ. 

ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಜನರ ಆಶೀರ್ವಾದವಿದ್ದು, 8 ಬಾರಿ ಶಾಸಕನಾಗಿ, ನಾಲ್ಕು ಬಾರಿ ಮಂತ್ರಿಯಾಗಿದ್ದೇನೆ. ಕಳಂಕಹರಿತ ವ್ಯಕ್ತಿತ್ವ ನನ್ನದಾಗಿದೆ. ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಗಳು ನನಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com