ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ: ಸಚಿವ ಬಸವರಾಜ ಬೊಮ್ಮಾಯಿ

ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ, ಯಾವುದೂ ಅಧಿಕೃತವಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ. 
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ, ಯಾವುದೂ ಅಧಿಕೃತವಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ, ಯಾವುದೂ ಅಧಿಕೃತವಲ್ಲ ನಾಯಕತ್ವದ ಬದಲಾವಣೆ ಪ್ರಶ್ನೆಗಳಿಗೆ‌ ನಾನು ಉತ್ತರ ನೀಡುವುದಿಲ್ಲ. ಸಿಎಂ ಹುದ್ದೆ ನನ್ನ ಹೆಸರು ಕೇಳಿ ಬರುತ್ತಿರೋದು ಕೂಡ ಊಹಾಪೋಹವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. 

ಪಕ್ಷದ ಹೈಕಮಾಂಡ‌ ಹೇಳಿದನ್ನು ಪಾಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಭಾರೀ ಮಳೆಯಿಂದಾಗಿ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ.ಸದ್ಯದ ಪರಿಸ್ಥಿಯಲ್ಲಿ ನಮ್ಮ ಆದ್ಯತೆ ಪ್ರವಾಹದ ಕಡೆಯಾಗಿದೆ ಎಂದು ತಿಳಿಸಿದ್ದಾರೆ.

ಮಠಾಧೀಶರು ಸಭೆ ಕುರಿತು ಮಾತನಾಡಿ, ಕಳೆದು ಒಂದು ವಾರದಿಂದ ಸ್ವಾಮೀಜಿಗಳು ಭೇಟಿಯಾಗುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ಇಂದು ಬೆಂಗಳೂರಿನಲ್ಲಿ ಮಠಾಧೀಶರು ಸಭೆ ಕರೆದಿದ್ದಾರೆ ಅಷ್ಟೇ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com