ತೈಲ ಬೆಲೆ ಏರಿಕೆಗೆ ಖಂಡನೆ: '100 ನಾಟ್​ಔಟ್' ಹೆಸರಿನಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

ಕೊರೋನಾ ಸಾಂಕ್ರಾಮಿಕ ರೋಗ ಸಂಕಷ್ಟದ ಸಂದರ್ಭದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿದ್ದು, ಇದಕ್ಕೆ ಖಂಡನೆ ವ್ಯಕ್ತಪಡಿಸುವ ಕಾಂಗ್ರೆಸ್ ರಾಜ್ಯದಲ್ಲಿ 100 ನಾಟ್ಔಟ್ ಹೆಸರಿನಲ್ಲಿ ವಿನೂತನ ಪ್ರತಿಭಟನೆಯನ್ನು ಶುಕ್ರವಾರ ಆರಂಭಿಸಲಿದೆ.
ಕಾಂಗ್ರೆಸ್ ಬೆಂಬಲಿಗರಿಂದ ಪ್ರತಿಭಟನೆ
ಕಾಂಗ್ರೆಸ್ ಬೆಂಬಲಿಗರಿಂದ ಪ್ರತಿಭಟನೆ

ಬೆಂಗಳೂರು; ಕೊರೋನಾ ಸಾಂಕ್ರಾಮಿಕ ರೋಗ ಸಂಕಷ್ಟದ ಸಂದರ್ಭದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿದ್ದು, ಇದಕ್ಕೆ ಖಂಡನೆ ವ್ಯಕ್ತಪಡಿಸುವ ಕಾಂಗ್ರೆಸ್ ರಾಜ್ಯದಲ್ಲಿ 100 ನಾಟ್ಔಟ್ ಹೆಸರಿನಲ್ಲಿ ವಿನೂತನ ಪ್ರತಿಭಟನೆಯನ್ನು ಶುಕ್ರವಾರ ಆರಂಭಿಸಲಿದೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಐದು ದಿನಗಳ ಕಾಲ ಈ ಪ್ರತಿಭಟನೆ ನಡೆಯಲಿದೆ.

ರಾಜ್ಯದ ಎಲ್ಲಾ ಭಾಗಗಳಿಂದರೂ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಕರೆ ನೀಡಿದ್ದಾರೆ. 

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾತನಾಡಿ, ಕಳೆದ 12 ತಿಂಗಳುಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ರೂ.30 ರಷ್ಟು ಹೆಚ್ಚಳವಾಗಿದೆ. ಇದೀಗ ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಈಗಾಗಲೇ ಉದ್ಯೋಗ ಇಲ್ಲದೆ, ವೇತನ ಕಡಿತಗೊಂಡು ಸಂಕಷ್ಟಕ್ಕೆ ಸಿಲುಕಿರುವ ಸಾಮಾನ್ಯ ಜನರ ಮೇಲೆ ಇದು ಗಂಭೀರ ಪರಿಣಾಮ ಬೀರಲಿದೆ ಎಂದು ಕಿಡಿಕಾರಿದ್ದಾರೆ. 

ಮಾಜಿ ಸಚಿವ ಕೃಷ್ಣ ಬೈರೇಗೌಡ ಅವರು ಮಾತನಾಡಿ, ತೈಲ ಬೆಲೆ ರೂ.100ರ ಗಡಿ ದಾಡಿದೆ. ಇದು ಅಂತರಾಷ್ಟ್ರೀಯ ತೈಲ ಕಂಪನಿಗಳು ಏರಿಕೆ ಮಾಡಿದ್ದರಿಂದಾಗಿಲ್ಲ. ಮೋದಿ ಸರ್ಕಾರ್ದ ಇಂಧನದ ಮೇಲಿನ ಕಠಿಣ ತೆರಿಗೆಯಿಂದಾಗಿ ಹೆಚ್ಚಳವಾಗಿದೆ ಎಂದಿದ್ದಾರೆ. 

ಶಾಸಕರಾದ ಪ್ರಿಯಾಂಕ್ ಖರ್ಗೆ ಮತ್ತು ರಿಜ್ವಾನ್ ಅರ್ಷದ್ ಕೂಡ ಸಾಮಾನ್ಯ ನಾಗರಿಕನ ಮೇಲೆ ಹೊರೆಯಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com