ಮಂಡ್ಯ: ‘ಸ್ವಾತಂತ್ರ್ಯ ಬಂದ ಬಳಿಕ 60 ವರ್ಷ ರಾಜ್ಯ ಆಳಿದ ಕಾಂಗ್ರೆಸ್ ಮುಖಂಡರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ವಿಚಾರ ಗೊತ್ತಿರಲಿಲ್ಲವೇ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಪ್ರಶ್ನಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ದಲಿತರು ಮುಖ್ಯಮಂತ್ರಿಯಾಗುವುದನ್ನು ನಾವು ತಪ್ಪಿಸಿಲ್ಲ. ಅವಕಾಶ ತಪ್ಪಿಸಿದ್ದವರೇ ಈಗ ಮತ್ತೆ ಸಿ.ಎಂ ಆಗಬೇಕು ಎಂದು ಹೇಳಿಕೊಳ್ಳುತ್ತಿದ್ದಾರೆ. ತಾನಿದ್ದರೆ ಮಾತ್ರ ಕಾಂಗ್ರೆಸ್ ಎಂದೂ ಹೇಳಿಕೊಳ್ಳುತ್ತಾರೆ. 130 ಸೀಟ್ನಿಂದ 78ಕ್ಕೆ ಇಳಿಸಿದರಲ್ಲ ಅವರೇ ದಲಿತರಿಗೆ ಸಿ.ಎಂ ಆಗುವ ಅವಕಾಶ ತಪ್ಪಿಸಿದ್ದಾರೆ’ ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಅವಕಾಶ ಸಿಕ್ಕಾಗಲೇ ಕಾಂಗ್ರೆಸ್ ದಲಿತರನ್ನ ಸಿಎಂ ಮಾಡಲಿಲ್ಲ. 2008ರಲ್ಲಿ ನಾನೇ ಮಲ್ಲಿಕಾರ್ಜುನ ಖರ್ಗೆಗೆ ಮನವಿ ಮಾಡಿದ್ದೆ. ಬೇಷರತ್ ಬೆಂಬಲ ಕೊಡುತ್ತೇವೆ ಎಂದರೂ ಮಾಡಿರಲಿಲ್ಲ. ಕಾಂಗ್ರೆಸ್ ನಲ್ಲಿ ವಲಸಿಗರು ಮೂಲ ಕಾಂಗ್ರೆಸ್ ಎಂದು ಚರ್ಚೆ ನಡೆಯುತ್ತಿದೆ ಎಂದು ಟೀಕಿಸಿದರು.
Advertisement