
ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಎಲ್ಲರ ಮನೆ ದೋಸೆನೂ ತೂತೇ, ಯಾರೂ ಕೂಡ ಸತ್ಯಹರಿಶ್ಚಂದ್ರರಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸಚಿವ ಸುಧಾಕರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಭೂಮಿ ಮೇಲೆ ಜನಿಸಿರುವ ಪ್ರತಿಯೊಂದು ಜೀವಿಗೂ ಸಹಜ ಪ್ರಕ್ರಿಯೆ ಇದೆ, ನಾನು ಈ ಹಿಂದೆ ಅಧಿವೇಶನದಲ್ಲಿ ನಾನು ಎಡವಿದ್ದ ಬಗ್ಗೆ ಹೇಳಿ ತಪ್ಪಿಕೊಂಡಿದ್ದೆ.
ಇಲ್ಲಿ ಯಾರು ಹರಿಶ್ಚಂದ್ರರಲ್ಲ, ಸುಮ್ಮನೆ ಏಕೆ ರಾಡಿ ಎರಚಿಕೊಳ್ಳುತ್ತೀರಿ. ನೀವು ಸತ್ಯವಂತರಾದರೇ ನೀವು ಕೋರ್ಟ್ ಗೆ ಏಕೆ ತಡೆಯಾಜ್ಞೆ ತಂದಿರಿ, ನಾನು ಮಾಡಿರುವ ತಪ್ಪು ಒಪ್ಪಿಕೊಂಡಿರುವಾಗ ನನ್ನ ಹೆಸರನ್ನು ಏಕೆ ಎಳೆದು ತರುತ್ತೀರಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ನೀವೇ ಸಮಸ್ಯೆ ತಂದು ಬೇರೆಯವರ ಮೇಲೆ ಏಕೆ ಕೆಸರು ಹಾಕುತ್ತಿದ್ದಾರೆ. ಬೀದಿಯಲ್ಲಿ ನಿಂತು ನಗೆಪಾಟಲಿಗೀಡಾಗುತ್ತಿದ್ದಾರೆ ಎಂದ ಕುಮಾರ ಸ್ವಾಮಿ, ಜನರ ಸಮಸ್ಯೆಯನ್ನು ಬಗೆಹರಿಸುವುದನ್ನು ಬಿಟ್ಟು, ಕೆಲಸಕ್ಕೆ ಬಾರದ ವಿಷಯಗಳ ಬಗ್ಗೆ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.