ನಮ್ಮ ಮಕ್ಕಳ ಮೇಲೆ ಸಾಲದ ಹೊರೆ ಹೊರಿಸಿದ್ದೇಕೆ? ಸಾಲ ಶೂರ ಬುರುಡೆರಾಮಯ್ಯ!

ರಾಜ್ಯಕ್ಕೆ ಸಾಲದ ಹೊರೆ ಹೊರಿಸಿದವರು ಯಾರೆಂಬುದನ್ನು ಈಗಲಾದರೂ ಒಪ್ಪಿಕೊಳ್ಳುವಿರಾ ಸಿದ್ದರಾಮಯ್ಯನವರೇ ಎಂದು ಬಿಜೆಪಿ ಪ್ರಶ್ನಿಸಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯಕ್ಕೆ ಸಾಲದ ಹೊರೆ ಹೊರಿಸಿದವರು ಯಾರೆಂಬುದನ್ನು ಈಗಲಾದರೂ ಒಪ್ಪಿಕೊಳ್ಳುವಿರಾ ಸಿದ್ದರಾಮಯ್ಯನವರೇ ಎಂದು ಬಿಜೆಪಿ ಪ್ರಶ್ನಿಸಿದೆ

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಅನೇಕ‌ ದಶಕಗಳಿಂದ ರಾಜ್ಯ ಕಾಯ್ದುಕೊಂಡು ಬಂದ ವಿತ್ತೀಯ ಶಿಸ್ತನ್ನು ನಾಲ್ಕೇ ವರ್ಷದಲ್ಲಿ ಅಸ್ತವ್ಯಸ್ತಗೊಳಿಸಿದ ಕೀರ್ತಿ‌ ಸಿದ್ದರಾಮಯ್ಯ ಅವರಿಗೆ ಸಲ್ಲಬೇಕು. ನಮ್ಮ ಮಕ್ಕಳ ಮೇಲೆ ಸಾಲದ ಹೊರೆ ಹೊರಿಸಿದ್ದೇಕೆ? ಸಾಲ ಶೂರ ಬುರುಡೆರಾಮಯ್ಯ ಎಂದು ಪ್ರಶ್ನಿಸಿದೆ. 

ನನ್ನ ಅವಧಿಯಲ್ಲಿ 'ಒಂದು ಬಾರಿಯೂ ವಿತ್ತೀಯ ಕೊರತೆ ಆಗಿಲ್ಲ' ಎನ್ನುವ ಸಿದ್ದರಾಮಯ್ಯನವರೇ  ನಿಮ್ಮ ಆಡಳಿತದ 5 ವರ್ಷಗಳಲ್ಲಿ ಸಾಲದ ಪ್ರಮಾಣ ದುಪ್ಪಟ್ಟಾಗಿತ್ತು. ಅಕ್ಕಿ ಕೊಟ್ಟೆ, ಮೊಟ್ಟೆ ಕೊಟ್ಟೆ ಎಂದು ಬಡಾಯಿ ಕೊಚ್ಚಿಕೊಳ್ಳುವ ನೀವು ರಾಜ್ಯದ ಜನತೆಯ ತಲೆಯ ಮೇಲೆ ಸಾಲವನ್ನು ಹೊರಿಸಿದರ ಬಗ್ಗೆ ಹೇಳಿಕೊಳ್ಳುವಿರಾ? ಎಂದು ತಿರುಗೇಟು ನೀಡಿದೆ.

ಟ್ವಿಟ್ಟರ್ ಪ್ರವಚನಕಾರ ಸಿದ್ದರಾಮಯ್ಯ ರಾಜ್ಯದ ಮೇಲೆ‌ ಸಾಲದ ಹೊರೆ ಹೊರಿಸಿ ನನ್ನ ಮಕ್ಕಳ ಲಸಿಕೆ ಎಲ್ಲಿದೆ ಎಂದು ಬೂಟಾಟಿಕೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಹಾಗೂ ಮೈತ್ರಿ ಸರ್ಕಾರದ ಅವಧಿಯ ಒಟ್ಟು 7 ವರ್ಷದಲ್ಲಿ ರಾಜ್ಯದ ಒಟ್ಟಾರೆ ಸಾಲ ಪ್ರಮಾಣ 3 ಪಟ್ಟು ಹೆಚ್ಚಳವಾಗಿದೆ.

2012-13 ರ ಕೊನೆಯಲ್ಲಿ ರಾಜ್ಯದ ಒಟ್ಟಾರೆ ಸಾಲ ಎತ್ತುವಳಿ 1 ಲಕ್ಷ ಕೋಟಿ. ರಾಜ್ಯದ ಒಟ್ಟಾರೆ ಸಾಲದ ಮೊತ್ತ ಈ ಪ್ರಮಾಣ ತಲುಪುವುದಕ್ಕೆ ಬೇಕಾದ ಸಮಯ 62 ವರ್ಷ. ಸಿದ್ದರಾಮಯ್ಯ ಸರ್ಕಾರದ ಮೊದಲ 4 ವರ್ಷದ ಸಾಲ ಎತ್ತುವಳಿ 2 ಲಕ್ಷ ಕೋಟಿ. ಕೊನೆಯ ವರ್ಷ ಹಾಗೂ ಮೈತ್ರಿ ಸರ್ಕಾರದ ಅವಧಿಯ ಸಾಲ ಪ್ರಮಾಣ 3 ಲಕ್ಷ ಕೋಟಿ.

ಮಾನ್ಯ ಸಿದ್ದರಾಮಯ್ಯನವರೇ ವಾಸ್ತವಾಂಶಗಳನ್ನು ತೆರೆದಿಟ್ಟರೆ ಅದನ್ನೇ ಸುಳ್ಳು‌ ಮಾಹಿತಿ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದೀರಿ. ನಿಮ್ಮ ಸಾಲ ಸಾಧನೆಯ ಬಗ್ಗೆ ಇನ್ನಷ್ಟು ಮಾಹಿತಿ ನೀಡುತ್ತೇವೆ. ಜಾರಿಕೊಳ್ಳುವ ಪ್ರಯತ್ನ ಮಾಡದೆ, ವಾಸ್ತವವನ್ನು ಒಪ್ಪಿಕೊಳ್ಳಿ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com