ಕೋವಿಡ್ ನಿಂದ ದಿನಕ್ಕೆ ಎಷ್ಟು ಮಂದಿ ಸಾಯುತ್ತಿದ್ದಾರೆ ಎಂಬ ಬಗ್ಗೆ ಸರ್ಕಾರಕ್ಕೆ ಅರಿವಿಲ್ಲ: ಸತೀಶ್ ಜಾರಕಿಹೊಳಿ

ಕೋವಿಡ್ 19 ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬೆಳಗಾವಿ: ಕೋವಿಡ್ 19 ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಪ್ರತಿದಿನ ಕೋವಿಡ್ ನಿಂದ ಎಷ್ಟು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂಬ ಬಗ್ಗೆ ಸರ್ಕಾರದ ಬಳಿ ಸೂಕ್ತ ಮಾಹಿತಿಯಿಲ್ಲ, ಸರ್ಕಾರಕ್ಕೆ ಅದರ ಅರಿವು ಇಲ್ಲ ಎಂದು ಕಿಡಿಕಾರಿದ್ದಾರೆ.

ಸರ್ಕಾರದ ನಿರ್ಲಕ್ಷ್ಯ ಹಾಗೂ ಸೂಕ್ತ ವೈದ್ಯಕೀಯ ಸೌಲಭ್ಯ ಸಿಗದೇ ರಾಜ್ಯದ ಜನ ತತ್ತರಿಸುತ್ತಿದ್ದಾರೆ ಎಂದು ದೂರಿದ್ದಾರೆ. ಎರಡನೇ ಅಲೆಯ ಬಗ್ಗೆ ತಜ್ಞರು ಮತ್ತು ವಿರೋಧ ಪಕ್ಷದ ನಾಯಕರು ನೀಡಿದ ಎಚ್ಚರಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com