ಮೈಸೂರು: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಮಾತೇ ಇಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ಆಡಳಿತ ಉತ್ತಮವಾಗಿದೆ. ಇನ್ನೂ ಎರಡು ವರ್ಷ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದರು. ರಾಜ್ಯದಲ್ಲಿ ನಾಯಕತ್ವ ಬದಲಾಗಲಿದೆ ಎನ್ನುವುದು ಕೇವಲ ಊಹಾಪೋಹ. ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸಚಿವ ನಿರಾಣಿ ಸ್ಪಷ್ಟಪಡಿಸಿದರು.
ಸಿಎಂ ಯಡಿಯೂರಪ್ಪ ಅವರು ಕೊರೋನಾ ಸಾಂಕ್ರಾಮಿಕ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ, ಮುಂದಿನ ಚುನಾವಣೆಯನ್ನು ನಾವು ಅವರ ನಾಯಕತ್ವದಲ್ಲೇ ಎದುರಿಸಲಿದ್ದೇವೆ ಎಂದು ನಿರಾಣಿ ತಿಳಿಸಿದ್ದಾರೆ.
ಮೈಸೂರು ಮೃಗಾಲಯದಲ್ಲಿ ಹಣಕಾಸಿನ ಕೊರತೆ ಬಗ್ಗೆ ಮಾಹಿತಿ ಪಡೆದ ಅವರು ತಮ್ಮ ಮೊಮ್ಮಗ ಸಮರ್ಥ್ ವಿಜಯ್ ಹೆಸರಿನಲ್ಲಿ ಹುಲಿಯೊಂದನ್ನು ದತ್ತು ಪಡೆದರು. ಪ್ರಾಣಿಗಳನ್ನು ದತ್ತು ಪಡೆಯಲು ಜನ ಮುಂದಾಗಬೇಕು ಎಂದು ನಿರಾಣಿ ಕರೆ ನೀಡಿದ್ದಾರೆ.
Advertisement