social_icon

ಹಾನಗಲ್ ಉಪ ಚುನಾವಣೆ: ಬಿಜೆಪಿ 'ಪವರ್' ಕಸಿಯಿತೇ 'ಅಪ್ಪು' ಸಾವು?

ಸಿಎಂ ತವರು ಜಿಲ್ಲೆ ಹಾನಗಲ್ ನಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂಬ ಬಗ್ಗೆ ವಿಮರ್ಶೆ ನಡೆಯುತ್ತಿದೆ.   ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಸೋಲಲು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾವು ಕೂಡ ಒಂದು ಕಾರಣ ಎಂದು ಹೇಳಲಾಗುತ್ತಿದೆ.

Published: 03rd November 2021 01:21 PM  |   Last Updated: 03rd November 2021 01:28 PM   |  A+A-


Basavaraja Bommai and puneeth rajkumar

ಅಪ್ಪು ಅಂತ್ಯಸಂಸ್ಕಾರದಲ್ಲಿ ಸಿಎಂ ಬೊಮ್ಮಾಯಿ

Posted By : shilpa
Source : The New Indian Express

ಹುಬ್ಬಳ್ಳಿ: ಸಿಎಂ ತವರು ಜಿಲ್ಲೆ ಹಾನಗಲ್ ನಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂಬ ಬಗ್ಗೆ ವಿಮರ್ಶೆ ನಡೆಯುತ್ತಿದೆ. ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಸೋಲಲು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾವು ಕೂಡ ಒಂದು ಕಾರಣ ಎಂದು ಹೇಳಲಾಗುತ್ತಿದೆ.

ನಟ ಪುನೀತ್ ರಾಜಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ಅಚ್ಚು ಕಟ್ಟಾಗಿ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಜನತೆಯ ಹೃದಯ ಗೆದ್ದಿದ್ದಾರೆ. ಕುಟುಂಬ ಸದಸ್ಯನಂತೆ ನಿಂತ ಸಿಎಂ ಎಲ್ಲಾ ಕಾರ್ಯ ವಿಧಾನಗಳನ್ನು ಸಂಪೂರ್ಣಗೊಳಿಸಿದರು. ಆದರೆ ಮತ್ತೊಂದೆಡೆ ತಮ್ಮ ತವರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಲ್ಲಿ ಪಕ್ಷದ ಅಭ್ಯರ್ಥಿ ಶಿವರಾಜ್ ಸಜ್ಜನರ್ ಅವರನ್ನು ಗೆಲ್ಲಿಸಿಕೊಳ್ಳಲಾಗಲಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಅಕ್ಟೋಬರ್ 30 ರಂದು ಹಾನಗಲ್ ವಿಧಾನಸಭೆ ಉಪ ಚುನಾವಣೆಗೆ ಮತದಾನ ನಡೆದಿತ್ತು, ಆದರೆ ಅಕ್ಟೋಬರ್ 30 ರಂದು ನಟ ಪುನೀತ್ ರಾಜ್ ಕುಮಾರ್ ಸಾವನ್ನಪ್ಪಿದ್ದರು, ಹೀಗಾಗಿ ಟಿವಿ ಮುಂದೆ ಪುನೀತ್ ಅಂತಿಮ ಕಾರ್ಯ ವಿಧಾನಗಳ ಬಗ್ಗೆ ನೋಡುತ್ತಾ ಕುಳಿತ ಯುವಕರ ಮತದಾನ ಮಾಡಲು ಆಸಕ್ತಿ ತೋರಲಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ಈಗಲೂ ಪುನೀತ್ ನಿಧನದ ಸುದ್ದಿ ನಂಬಲಾಗುತ್ತಿಲ್ಲ: ರಾಮ್ ಚರಣ್

ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರು ಗ್ರಾಮಸ್ಥರ ಮನೆ ಬಳಿಗೆ ವಾಹನ ತೆಗೆದುಕೊಂಡು ಹೋಗಿ ಮತದಾನ ಮಾಡುವಂತೆ ಹೇಳಿದ್ದಾರೆ. ನಮ್ಮ ನೆಚ್ಚಿನ ನಾಯಕ ಸಾವನ್ನಪ್ಪಿದ್ದಾನೆ ನಮಗೆ ಮತದಾನ ಮಾಡಲು ಮೂಡ್ ಇಲ್ಲ ಎಂದು ಗ್ರಾಮಸ್ಥರು ಹೇಳಿ ಕಳಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

ಜನರನ್ನು ಕರೆದುಕೊಂಡು ಬಂದು ಮತದಾನ ಮಾಡಿಸುವುದು ಕಾರ್ಯಕರ್ತರಿಗೆ ದೊಡ್ಡ ಸವಾಲಾಗಿತ್ತು,  ವಿಶೇಷವಾಗಿ ಯುವಕರು ಮತ್ತು ಹಿರಿಯರು, ಇದರ ಜೊತೆಗೆ ಹಲವು ಹಿರಿಯ ಮಹಿಳೆಯರು ಕೂಡ ಮತದಾನ ಮಾಡಲು ನಿರಾಕರಿಸಿದರು.

ಪುನೀತ್ ರಾಜಕುಮಾರ್ ನಿಧನದ ನಂತರ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಸುದ್ದಿಗಳನ್ನು ನೋಡುತ್ತಾ ಜನರು ಕುಳಿತಿದ್ದರು, ಇದರ ಪರಿಣಾಮ ಮೂರು ದಿನಗಳ ಕಾಲ ಟಿವಿಯ ಪ್ರೇಕ್ಷಕರ ಸಂಖ್ಯೆ ಕೂಡ ಹೆಚ್ಚಾಗಿದೆ. ಎಲ್ಲರೂ ಬಂದು ಮತದಾನ ಮಾಡಿದ್ದರೇ ಬಿಜೆಪಿ ಗೆಲುವು ಸಾಧಿಸುತ್ತಿತ್ತು ಎಂದು ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.


Stay up to date on all the latest ರಾಜಕೀಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • Sham

    It would have been a smart move to declare mourning and postpone elections
    1 year ago reply
flipboard facebook twitter whatsapp