ಚುನಾವಣೆಯಲ್ಲಿ ಸೋತರೂ ಜನ ಪ್ರೀತಿಸುವಂತಹ ನಾಯಕ: ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಜಿ.ಟಿ. ದೇವೇಗೌಡ!

 ಶಾಸಕ ಜಿ.ಟಿ.ದೇವೇಗೌಡ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜಕೀಯ ವೈರತ್ವ ಮರೆತು ನಗರದಲ್ಲಿ ಮಂಗಳವಾರ ಎರಡು ಕಾರ್ಯಕ್ರಮಗಳಲ್ಲಿ ವೇದಿಕೆಯನ್ನು ಹಂಚಿಕೊಂಡು, ಸೌಹಾರ್ದ ಪ್ರದರ್ಶಿಸಿ ಅಚ್ಚರಿ ಮೂಡಿಸಿದರು.
ಸಿದ್ದರಾಮಯ್ಯಮತ್ತು ಜಿ.ಟಿ ದೇವೇಗೌಡ
ಸಿದ್ದರಾಮಯ್ಯಮತ್ತು ಜಿ.ಟಿ ದೇವೇಗೌಡ
Updated on

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜಕೀಯ ವೈರತ್ವ ಮರೆತು ನಗರದಲ್ಲಿ ಮಂಗಳವಾರ ಎರಡು ಕಾರ್ಯಕ್ರಮಗಳಲ್ಲಿ ವೇದಿಕೆಯನ್ನು ಹಂಚಿಕೊಂಡು, ಸೌಹಾರ್ದ ಪ್ರದರ್ಶಿಸಿ ಅಚ್ಚರಿ ಮೂಡಿಸಿದರು.

ಪರಸ್ಪರ ಹೊಗಳಿದರು. ಹಿನಕಲ್ ಹಾಗೂ ಕೇರ್ಗಳ್ಳಿಯಲ್ಲಿ ನಡೆದ ಕಾರ್ಯಕ್ರಮ ಈ ಅಪರೂಪದ ಸಮಾಗಮಕ್ಕೆ ಸಾಕ್ಷಿಯಾಯಿತು. ಡಾ.ಎಚ್.ಸಿ.ಮಹದೇವಪ್ಪ ಅವರಂತಹ ದಲಿತ ನಾಯಕರನ್ನು ಬೆಳೆಸಿದ್ದೇ ಸಿದ್ದರಾಮಯ್ಯ. ವೀರಶೈವ ಸಮಾಜದ ಮುಖಂಡರನ್ನೂ ಬೆಳೆಸಿದ್ದಾರೆ. ಚುನಾವಣೆಯಲ್ಲಿ ಸೋತರೂ ಜನ ಪ್ರೀತಿಸುವಂತಹ ನಾಯಕ ಅವರು’ ಎಂದು ದೇವೇಗೌಡರು ಶ್ಲಾಘಿಸಿದರು.

‘ಜಿ.ಟಿ.ದೇವೇಗೌಡರನ್ನು ಜೆಡಿಎಸ್‌ನಲ್ಲೇ ಉಳಿಸಿಕೊಳ್ಳಲು ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ ಯತ್ನಿಸಿದ್ದಾರೆ. ಆದರೂ ಅವರು ಬರುವುದಾದರೆ ಸ್ವಾಗತ’ ಎಂದು ಆಹ್ವಾನವಿತ್ತ ಸಿದ್ದರಾಮಯ್ಯ, ‘ಜಿ.ಟಿ. ಕೇಳ್ತಾ ಇದ್ದೀಯೇನಪ್ಪಾ’ ಎಂದು ಆತ್ಮೀಯತೆ ತೋರಿದರು.

ಅದಕ್ಕೂ ಮುಂಚೆ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ‘ಜಿ.ಟಿ.ದೇವೇಗೌಡ, ಸಿದ್ದರಾಮಯ್ಯ ಅಕ್ಕ–ಪಕ್ಕ ಕುಳಿತಿದ್ದಾರೆ ಹೊಡಿರಿ ಚಪ್ಪಾಳೆ’ ಎಂದು ಹೇಳಿ ಕಾರ್ಯಕರ್ತರಲ್ಲಿ ಹುರುಪು ತುಂಬಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com