ಕುಟುಂಬ ರಾಜಕಾರಣದ ರೆಂಬೆ-ಕೊಂಬೆ ಎಷ್ಟೊಂದು ಸಮೃದ್ಧ!

ವಿಧಾನ ಪರಿಷತ್ ಚುನಾವಣಾ ಕಾವು ಹೆಚ್ಚಾಗುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಓಲೈಕೆ ಕುಟುಂಬ ರಾಜಕಾರಣ ಮಣೆ ಹಾಕುತ್ತಿವೆ ಎಂದು ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ಮಾಡಿದೆ.
ಭವಾನಿ ಮತ್ತು ಸೂರಜ್ ರೇವಣ್ಣ
ಭವಾನಿ ಮತ್ತು ಸೂರಜ್ ರೇವಣ್ಣ

ಬೆಂಗಳೂರು: ವಿಧಾನ ಪರಿಷತ್ ಚುನಾವಣಾ ಕಾವು ಹೆಚ್ಚಾಗುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಓಲೈಕೆ ಕುಟುಂಬ ರಾಜಕಾರಣ ಮಣೆ ಹಾಕುತ್ತಿವೆ ಎಂದು ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ಮಾಡಿದೆ.

ಕುಟುಂಬ ರಾಜಕಾರಣದ ರೆಂಬೆ-ಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡಿ ಜೆಡಿಎಸ್ ಗೆ ತಿರುಗೇಟು ಕೊಟ್ಟಿದೆ. ಭವಾನಿ ರೇವಣ್ಣ ಅವರಿಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಟಿಕೆಟ್ ನೀಡಬೇಕೆಂಬ ಬಗ್ಗೆ ಪ್ರಸ್ತಾಪವಾಗಿದೆ. ಕಾರ್ಯಕರ್ತರ ಭಾವನೆಗೆ ಬೆಲೆ ನೀಡಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಒಪ್ಪಿಗೆ ಸೂಚಿಸಿದ್ದಾರೆ. ಕುಟುಂಬ ರಾಜಕಾರಣದ ಇನ್ನೊಂದು ಮುಖ ಅನಾವರಣವೇ? ಎಂದು ಪ್ರಶ್ನಿಸಿದೆ.

ಓಲೈಕೆ ರಾಜಕಾರಣ ಕಾಂಗ್ರೆಸ್ ಸಿದ್ಧಾಂತ, ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಈ ಎರಡು ಪಕ್ಷಗಳು ಕುಟುಂಬವಾದಕ್ಕೆ ಮಣೆ ಹಾಕುತ್ತಿರುವುದು ಪ್ರಜಾಪ್ರಭುತ್ವದ ವ್ಯಂಗ್ಯ ಎಂದು ಹೇಳಿದೆ. ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ, ರೇವಣ್ಣ, ಸೂರಜ್ ರೇವಣ್ಣ, ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ ಎಂದು ವ್ಯಂಗ್ಯವಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com