ಎ.ಕೆ. ಆಂಟನಿ ನೇತೃತ್ವದ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ಸದಸ್ಯರಾಗಿ ಡಾ. ಜಿ.ಪರಮೇಶ್ವರ್ ನೇಮಕ

ಕೇರಳದ ಎ.ಕೆ. ಆಂಟನಿ ಅವರನ್ನು ಕಾಂಗ್ರೆಸ್ ಪಕ್ಷದ ಶಿಸ್ತು ಪಾಲನಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಾಗಿದ್ದ ಡಾ. ಜಿ. ಪರಮೇಶ್ವರ್ ಅವರನ್ನು ಶಿಸ್ತು ಪಾಲನಾ ಸಮಿತಿ ಸದಸ್ಯರನ್ನಾಗಿ ನೇಮಿಸುವ ಮೂಲಕ ಪಕ್ಷದ ಕೇಂದ್ರ ಸಂಘಟನೆಗೆ ನಿಯೋಜಿಸಿದಂತಾಗಿದೆ. 
ಡಾ.ಜಿ. ಪರಮೇಶ್ವರ್
ಡಾ.ಜಿ. ಪರಮೇಶ್ವರ್

ನವದೆಹಲಿ: ಕೇರಳದ ಎ.ಕೆ. ಆಂಟನಿ ಅವರನ್ನು ಕಾಂಗ್ರೆಸ್ ಪಕ್ಷದ ಶಿಸ್ತು ಪಾಲನಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಾಗಿದ್ದ ಡಾ. ಜಿ. ಪರಮೇಶ್ವರ್ ಅವರನ್ನು ಶಿಸ್ತು ಪಾಲನಾ ಸಮಿತಿ ಸದಸ್ಯರನ್ನಾಗಿ ನೇಮಿಸುವ ಮೂಲಕ ಪಕ್ಷದ ಕೇಂದ್ರ ಸಂಘಟನೆಗೆ ನಿಯೋಜಿಸಿದಂತಾಗಿದೆ. 

ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ , ಮಾಜಿ ಕೇಂದ್ರ ಸಚಿವೆ ಅಂಬಿಕಾ ಸೋನಿ ಹಾಗೂ ಹಿರಿಯ ಮುಖಂಡ ತಾರಿಖ್ಅನ್ವಾರ್ ಅವರನ್ನು ಸೇರಿದಂತೆ ಐವರು ಸದಸ್ಯರನ್ನೊಳಗೊಂಡ ಪಕ್ಷದ ಶಿಸ್ತು ಪಾಲನಾ ಸಮಿತಿಯನ್ನು ಗುರುವಾರ ಕಾಂಗ್ರೆಸ್ ಪುನರ್ ರಚಿಸಿದೆ.

ಕೂಡಲೇ ಜಾರಿಗೆ ಬರುವಂತೆ ಕಾಂಗ್ರೆಸ್ ಅಧ್ಯಕ್ಷರು ಎಐಸಿಸಿ ಶಿಸ್ತು ಪಾಲನಾ ಸಮಿತಿಯನ್ನು ಪುನರ್ ರಚಿಸಿದ್ದು, ಎ. ಕೆ. ಆಂಟನಿ ಇದರ ಮುಖ್ಯಸ್ಥರಾಗಿರುತ್ತಾರೆ. ತಾರಿಖ್ ಅನ್ವರ್ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ ಎಂದು ಪಕ್ಷದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ದೆಹಲಿಯ ಮಾಜಿ ಸಂಸದ ಜೈ ಪ್ರಕಾಶ್ ಅಗರ್ ವಾಲ್ ಮತ್ತು ಜಿ ಪರಮೇಶ್ವರ್ ಈ ಸಮಿತಿಯ ಇತರ ಪ್ರಮುಖ ಸದಸ್ಯರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com