ಮೈಸೂರು: ರಾಜ್ಯದಲ್ಲಿ ಈಗ ವಿಧಾನಪರಿಷತ್ ಚುನಾವಣೆಯ ಭರಾಟೆ. ಪಕ್ಷಗಳು ಟಿಕೆಟ್ ಅಂತಿಮಗೊಳಿಸುತ್ತಿದ್ದು, ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದೆ.
ಈ ಮಧ್ಯೆ ಮೈಸೂರಿನ ಜೆಡಿಎಸ್ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಗೆ ಎರಡನೇ ಬಾರಿ ಸ್ಪರ್ಧಿಸುವುದಕ್ಕೆ ಟಿಕೆಟ್ ಕೈತಪ್ಪಿದ್ದು ಭಾರಿ ನಿರಾಸೆಯಾಗಿದೆ. ನ.22 ರಂದು ಜೆಡಿಎಸ್ ಸೇರಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಮಂಜೇಗೌಡ ಅವರಿಗೆ ಜೆಡಿಎಸ್ ನ ಟಿಕೆಟ್ ನೀಡಲಾಗಿದೆ.
ಇದಕ್ಕೂ ಮುನ್ನ ಸಂದೇಶ್ ನಾಗರಾಜ್ ಬಿಜೆಪಿ ಸೇರಲು ಯತ್ನಿಸಿ ವಿಫಲವಾದ ಹಿನ್ನೆಲೆಯಲ್ಲಿ ಮತ್ತೆ ಜೆಡಿಎಸ್ ನಲ್ಲೇ ಮುಂದುವರೆಯಲು ನಿರ್ಧರಿಸಿದ್ದರು. ಆದರೆ ಬಿಜೆಪಿ ಸೇರುವ ಉತ್ಸಾಹದಲ್ಲಿ ಜೆಡಿಎಸ್ ವಿರುದ್ಧ ತೀವ್ರ ಹೇಳಿಕೆಗಳನ್ನು ನೀಡಿದ್ದರು.
ಸಂದೇಶ್ ನಾಗರಾಜ್ ಅವರ ಈ ನಡೆಯಿಂದ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೂ ನ.22 ರಂದು ಸಂದೇಶ್ ನಾಗರಾಜ್ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು.
Advertisement