'ಕಾಂಗ್ರೆಸ್ ಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ'

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹರಿಹಾಯ್ದಿದ್ದಾರೆ. ಬಿಜೆಪಿ– ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ರವಿ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹರಿಹಾಯ್ದಿದ್ದಾರೆ. ಬಿಜೆಪಿ– ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ರವಿ ತಿರುಗೇಟು ನೀಡಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ’ ಎಂದು ಲೇವಡಿ ಮಾಡಿದ್ದಾರೆ. ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಪ್ರಮುಖರ ಸಮಿತಿ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡುವಾಗ ‘ಬಿಜೆಪಿ– ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ.

ಇನ್ನೊಬ್ಬರ ಮನೆಯೊಳಗೆ ಇಣುಕಿ ನೋಡುವ ಕೆಟ್ಟ ಚಟ ಸಿದ್ದರಾಮಯ್ಯ ಅವರಿಗೆ ಏಕೆ ಬಂತೋ ಗೊತ್ತಿಲ್ಲ. ಆದರೆ, ಅದು ಒಳ್ಳೆಯ ಲಕ್ಷಣವಲ್ಲ’ ಎಂದರು. ಒಳ ಒಪ್ಪಂದದ ಕಾರಣದಿಂದ ಜೆಡಿಎಸ್‌ ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ರವಿ, ‘ಯಾವ ಪಕ್ಷದವರು ಯಾರಿಗೆ ಟಿಕೆಟ್‌ ನೀಡಬೇಕು ಎಂಬುದನ್ನು ನಾನು ಹೇಳಲು ಸಾಧ್ಯವೆ? ಕಾಂಗ್ರೆಸ್‌ನವರು ಯಾವತ್ತಾದರೂ ಆರೆಸ್ಸೆಸ್‌ನವರಿಗೆ ಟಿಕೆಟ್‌ ಕೊಟ್ಟಿದ್ದಾರಾ? ಅವರಿಗೆ ರಾಷ್ಟ್ರೀಯ ಹಿತ ಇಲ್ಲ ಎಂದು ನಾನು ಹೇಳಲು ಸಾಧ್ಯವೆ’ ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com