ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ: ಸಿದ್ದರಾಮಯ್ಯ

ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಅವರು, ‘ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಗೂಂಡಾ ರಾಜ್ಯದಲ್ಲಿ ದಲಿತರು, ರೈತರು,‌ ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ
ಯಾವುದೂ ಸುರಕ್ಷಿತ ಅಲ್ಲ.  ಸಂವಿಧಾನವೇ ಕುಸಿದು‌ಬಿದ್ದಿರುವ ಸ್ಥಿತಿಯಲ್ಲಿ ರಾಷ್ಟ್ರಪತಿ ಮಧ್ಯಪ್ರವೇಶಿಸಿ ಅಲ್ಲಿನ ಬಿಜೆಪಿ ಅಲ್ಲಿನ ಸರ್ಕಾರವನ್ನು ವಜಾಗೊಳಿಸಬೇಕು’ ಎಂದು
ಆಗ್ರಹಿಸಿದ್ದಾರೆ.

ಪ್ರತಿರೋಧ- ಭಿನ್ನಾಭಿಪ್ರಾಯವನ್ನು ಸಹಿಸದ ಬಿಜೆಪಿ ಸರ್ಕಾರ, ತನ್ನ ತಾಲಿಬಾನಿ‌ ಮನಸ್ಥಿತಿಯನ್ನು ಬತ್ತಲು‌ ಮಾಡಿಕೊಳ್ಳುತ್ತಿದೆ. ರೈತರ‌ ಹತ್ಯೆ ನಡೆದ ಸ್ಥಳಕ್ಕೆ ಭೇಟಿ‌ ನೀಡಲು
ಹೊರಟ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವ ಯೋಗಿ ಆದಿತ್ಯನಾಥ ಸರ್ಕಾರದ ಕೃತ್ಯ ಖಂಡನೀಯ’ ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com