ಬೆಂಗಳೂರು: ಆರ್ ಎಸ್ ಎಸ್ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿಟಿ ರವಿ, ಸಂಘದ ಸಿದ್ಧಾಂತ ಒಪ್ಪಿದರೇ ನಿಮಗೂ ಸ್ವಾಗತ ಎಂದಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಟಿ ರವಿ, ಕುಮಾರಸ್ವಾಮಿಯವರೇ ನಿಮಗೆ ಆರ್ಎಸ್ಎಸ್ ಬಗ್ಗೆ ಇನ್ನೂ ಅನುಮಾನಗಳಿದ್ದರೆ ನಿಮ್ಮ ತಂದೆ ದೇವೇಗೌಡರಲ್ಲಿ ಆ ಬಗ್ಗೆ ಕೇಳಿ. ದೇವೇಗೌಡರೇ ಆರ್ಎಸ್ಎಸ್ ಸಿದ್ಧಾಂತವನ್ನು ಒಪ್ಪಿಕೊಂಡಿದ್ದಾರೆ’ ಎಂದು ಹೇಳಿದ್ದಾರೆ.
ಆರ್ಎಸ್ಎಸ್ನಲ್ಲಿ ವ್ಯಕ್ತಿ ನಿರ್ಮಾಣದ ಜೊತೆ ರಾಷ್ಟ್ರ ನಿರ್ಮಾಣದ ಧ್ಯೇಯ ಇರುವ ಕಾರಣ ಇಂದು ನಮ್ಮ ಪ್ರಧಾನಿಗಳು, ರಾಷ್ಟ್ರಪತಿ, ಉಪರಾಷ್ಟ್ರಪತಿ, ಸಂಘದ ಸ್ವಯಂ ಸೇವಕರು. ಉನ್ಮತ ಮಟ್ಟದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಶೂನ್ಯಮಟ್ಟಕ್ಕೆ ತಂದಿದ್ದಾರೆ.
ಇದು ಯಾವುದರ ಪರಿಣಾಮ ಸನ್ಮಾನ್ಯ @hd_kumaraswamy ಅವರೇ?
1/14
— C T Ravi
Advertisement