'ಸಂಘದ ಬಗ್ಗೆ ಅನುಮಾನಗಳಿದ್ದರೆ ದೇವೇಗೌಡರಲ್ಲಿ ಕೇಳಿ; ಸಿದ್ಧಾಂತಗಳ ಬಗ್ಗೆ ಹಗುರವಾಗಿ ಮಾತನಾಡಿರುವುದು ಅಪ್ರಬುದ್ಧತೆಗೆ ಸಾಕ್ಷಿ'

ಆರ್ ಎಸ್ ಎಸ್ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಆರ್ ಎಸ್ ಎಸ್ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿಟಿ ರವಿ, ಸಂಘದ ಸಿದ್ಧಾಂತ ಒಪ್ಪಿದರೇ ನಿಮಗೂ ಸ್ವಾಗತ ಎಂದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಟಿ ರವಿ, ಕುಮಾರಸ್ವಾಮಿಯವರೇ ನಿಮಗೆ ಆರ್‌ಎಸ್‌ಎಸ್‌ ಬಗ್ಗೆ ಇನ್ನೂ ಅನುಮಾನಗಳಿದ್ದರೆ ನಿಮ್ಮ ತಂದೆ ದೇವೇಗೌಡರಲ್ಲಿ ಆ ಬಗ್ಗೆ ಕೇಳಿ. ದೇವೇಗೌಡರೇ ಆರ್‌ಎಸ್‌ಎಸ್‌ ಸಿದ್ಧಾಂತವನ್ನು ಒಪ್ಪಿಕೊಂಡಿದ್ದಾರೆ’ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com