social_icon

ಆರ್ ಎಸ್ ಎಸ್ ಗೆ ಎಚ್ ಡಿಕೆ ಗುದ್ದು; ಬಿಜೆಪಿಯ ಮೋದಿ ಉತ್ಸವದಲ್ಲಿ ಸಾ.ರಾ. ಮಹೇಶ್ ಭಾಗಿ: ಏನಿದರ ಗುಟ್ಟು!

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರ್ ಎಸ್ ಎಸ್ ವಿರುದ್ಧ ಹರಿಹಾಯುತ್ತಿದ್ದರೇ ಮತ್ತೊಂದೆಡೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಎಸ್‌.ಎ. ರಾಮದಾಸ್‌ ಆಯೋಜಿಸಿದ್ದ ಮೋದಿ ಯುಗ ಉತ್ಸವ್‌ ಕಾರ್ಯಕ್ರಮದಲ್ಲಿ ಜೆಡಿಎಸ್‌ ಶಾಸಕ ಸಾ.ರಾ. ಮಹೇಶ್‌ ಪಾಲ್ಗೊಂಡಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

Published: 07th October 2021 09:23 AM  |   Last Updated: 07th October 2021 01:00 PM   |  A+A-


JDS MLA turns up at BJP event, raises eyebrows

ಮೋದಿ ಉತ್ಸವದಲ್ಲಿ ಜೆಡಿಎಸ್ ಶಾಸಕ ಸಾರಾ ಮಹೇಶ್

Posted By : shilpa
Source : The New Indian Express

ಮೈಸೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರ್ ಎಸ್ ಎಸ್ ವಿರುದ್ಧ ಹರಿಹಾಯುತ್ತಿದ್ದರೇ ಮತ್ತೊಂದೆಡೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಎಸ್‌.ಎ. ರಾಮದಾಸ್‌ ಆಯೋಜಿಸಿದ್ದ ಮೋದಿ ಯುಗ ಉತ್ಸವ್‌ ಕಾರ್ಯಕ್ರಮದಲ್ಲಿ ಜೆಡಿಎಸ್‌ ಶಾಸಕ ಸಾ.ರಾ. ಮಹೇಶ್‌ ಪಾಲ್ಗೊಂಡಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ವಿದ್ಯಾರಣ್ಯಪುರಂನ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಮೋದಿ ಯುಗ ಉತ್ಸವ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಾ.ರಾ. ಮಹೇಶ್‌ ಅವರು, ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದ ಅಂಚೆ ಪತ್ರವನ್ನು ಅಂಚೆ ಪೆಟ್ಟಿಗೆಗೆ ಹಾಕಿದರು. ಈ ವೇಳೆ ಸಾ.ರಾ. ಮಹೇಶ್‌ ಅವರಿಗೆ ಕೇಸರಿ ಶಾಲು ಹೊದಿಸಿ ಸ್ವಾಗತಿಸಲಾಯಿತು. ಕಾರ್ಯಕ್ರಮ ಮುಗಿಯುವವರೆಗೂ ಕೇಸರಿ ಶಾಲು ಹಾಕಿಕೊಂಡಿದ್ದರು. 

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈ ಕಾರ್ಯಕ್ರಮದಲ್ಲಿ ಶಾಸಕ ಸಾ.ರಾ. ಮಹೇಶ್‌ ಅವರು ಪಾಲ್ಗೊಂಡಿರುವುದು ವಿಶೇಷ. ಅವರು ಮೋದಿ ಅವರಿಗೆ ಹುಟ್ಟುಹಬ್ಬದ ಶುಭ ಕೋರಿರುವುದು ಮತ್ತೂ ವಿಶೇಷವಾಗಿದ್ದು, ಅಂತರಂಗದಲ್ಲಿ ಅವರು ನಮ್ಮವರು ಎಂಬ ಅಭಿಮಾನವಿದೆ. ಆದರೆ ಅವರು ಬೇರೆಡೆ ಇದ್ದಾರೆ ಎಂದರು.

ಇದನ್ನೂ ಓದಿ: ಮತ್ತೆ ರೋಹಿಣಿ ಸಿಂಧೂರಿ ಸುದ್ದಿಯಲ್ಲಿ: 6 ಕೋಟಿ ರೂ. ಕಿಕ್ ಬ್ಯಾಕ್ ಆರೋಪ; ವಜಾಗೊಳಿಸುವಂತೆ ಸಾ.ರಾ. ಮಹೇಶ್ ಆಗ್ರಹ

ಸಚಿವರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜು ಅವರೊಂದಿಗೆ ಕುಳಿತ ಸಾ.ರಾ.ಮಹೇಶ್ ಅವರು ಕೇಸರಿ ಶಾಲನ್ನು ಬಿಜೆಪಿ ಕಾರ್ಯಕರ್ತರಂತೆ ತನ್ನ ಹೆಗಲಿಗೆ ಹಾಕಿಕೊಳ್ಳುವ ಮೂಲಕ ಕಾರ್ಯಕರ್ತರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಈ ಮೊದಲು ಸಾ.ರಾ. ಮಹೇಶ್‌ ಅವರು, ಬಿಜೆಪಿಯಲ್ಲೇ ಇದ್ದು, ಕೆ.ಆರ್‌.ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಳಿಕ ಜೆಡಿಎಸ್‌ ಸೇರಿ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಶಾಸಕ ಎಸ್‌.ಎ. ರಾಮದಾಸ್‌ ಅವರ ಆಪ್ತವಲಯದಲ್ಲಿರುವ ನಾಯಕರಲ್ಲಿ ಸಾ.ರಾ. ಮಹೇಶ್‌ ಕೂಡ ಒಬ್ಬರಾಗಿದ್ದಾರೆ.


Stay up to date on all the latest ರಾಜಕೀಯ news
Poll

ಸಿದ್ದರಾಮಯ್ಯ ಸರ್ಕಾರದಿಂದ ಐದು ಗ್ಯಾರಂಟಿಗಳ ಜಾರಿ: ಇತರ ರಾಜ್ಯಗಳ ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದೇ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • Narayana Murthy

    Andre idu Godru family polical astatva kalefukollutiddare anta kaanitte
    1 year ago reply
flipboard facebook twitter whatsapp