ಬಿಜೆಪಿಗೂ ಆರ್ ಎಸ್ ಎಸ್ ಗೂ ಸಂಬಂಧವಿಲ್ಲ: ಕೇಂದ್ರ ಸಚಿವ ನಾರಾಯಣಸ್ವಾಮಿ

ಬಿಜೆಪಿಗೂ, ಆರ್‌ಎಸ್‌ಎಸ್‌ಗೂ ಸಂಬಂಧವಿಲ್ಲ. ಅಧಿಕಾರ ವ್ಯವಸ್ಥೆಯಲ್ಲಿ ಆರ್‌ಎಸ್‌ಎಸ್‌ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.  
ನಾರಾಯಣಸ್ವಾಮಿ
ನಾರಾಯಣಸ್ವಾಮಿ

ಚಿತ್ರದುರ್ಗ: ಬಿಜೆಪಿಗೂ, ಆರ್‌ಎಸ್‌ಎಸ್‌ಗೂ ಸಂಬಂಧವಿಲ್ಲ. ಅಧಿಕಾರ ವ್ಯವಸ್ಥೆಯಲ್ಲಿ ಆರ್‌ಎಸ್‌ಎಸ್‌ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.  

ಶುಕ್ರವಾರ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ಕುರಿತು ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ‘ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ಒಂದು ರೀತಿ ಹಾಗೂ ಅಧಿಕಾರ ಇಲ್ಲದಾಗ ಮತ್ತೊಂದು ರೀತಿ ಮಾತನಾಡುತ್ತಾರೆ. ಸಂಘದ ಸಿದ್ಧಾಂತವನ್ನು ಬಿಜೆಪಿ ನಾಯಕರೆಲ್ಲರೂ ಸ್ವೀಕರಿಸಿದ್ದೇವೆ. ಬಿಜೆಪಿ ಜೊತೆಗೆ ಅಧಿಕಾರ ಹಂಚಿಕೊಳ್ಳುವ ಸಂದರ್ಭದಲ್ಲಿ ನಾವು ಆರ್‌ಎಸ್‌ಎಸ್‌ ಎಂಬುದು ಗೊತ್ತಿರಲಿಲ್ಲವೇ’ ಎಂದು ಪ್ರಶ್ನಿಸಿದರು.

ಉತ್ತರಪ್ರದೇಶದ ಲಿಖಿಂಪುರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಇದೇ ವಿಚಾರವಾಗಿ ಸಿದ್ದರಾಮಯ್ಯ ಅವರು ಆಡಿದ ಮಾತುಗಳು ಶೋಭೆ ತರುವುದಿಲ್ಲ. ಅವರ ಅಧಿಕಾರದ ಅವಧಿಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜವಾಬ್ದಾರಿಯುತ ಹುದ್ದೆ ನಿಭಾಯಿಸಿ ಹೀಗೆ ಮಾತನಾಡಬಾರದು’ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com