social_icon

ಮಾಜಿ ಸಿಎಂ ಬಿಎಸ್ ವೈ ವರ್ಚಸ್ಸು, ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ, ಉಪ ಚುನಾವಣೆಯಲ್ಲಿ ಬಿಜೆಪಿಗೆ ವರ: ಆಂತರಿಕ ಸಮೀಕ್ಷೆ

ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಗೆ ಮುನ್ನ ನಡೆಸಲಾಗಿರುವ ಆಂತರಿಕ ಸಮೀಕ್ಷೆ ಪ್ರಕಾರ, ಬಿಜೆಪಿ ವಿರೋಧ ಪಕ್ಷಗಳಿಗಿಂತ ಮುಂದಿದೆ. ಉಪ ಚುನಾವಣಾ ಫಲಿತಾಂಶ ಬಿಜೆಪಿ ಪರವಾಗಿ ಸಿಗುತ್ತದೆ ಎಂದು ಹೇಳಲಾಗುತ್ತಿದೆ.

Published: 14th October 2021 09:43 AM  |   Last Updated: 15th October 2021 01:03 PM   |  A+A-


BJP MLA AA Patil campaigns for party candidate Ramesh Bhusanur in Sindagi

ಸಿಂದಗಿಯಲ್ಲಿ ರಮೇಶ್ ಬೂಸನೂರ ಪರ ಪ್ರಚಾರ ನಡೆಸಿದ ಬಿಜೆಪಿ ಶಾಸಕ ಎ ಎ ಪಾಟೀಲ್

Posted By : sumana
Source : The New Indian Express

ಬೆಂಗಳೂರು: ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಗೆ ಮುನ್ನ ನಡೆಸಲಾಗಿರುವ ಆಂತರಿಕ ಸಮೀಕ್ಷೆ ಪ್ರಕಾರ, ಬಿಜೆಪಿ ವಿರೋಧ ಪಕ್ಷಗಳಿಗಿಂತ ಮುಂದಿದೆ. ಉಪ ಚುನಾವಣಾ ಫಲಿತಾಂಶ ಬಿಜೆಪಿ ಪರವಾಗಿ ಸಿಗುತ್ತದೆ ಎಂದು ಹೇಳಲಾಗುತ್ತಿದೆ.

ಎರಡೂ ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಪ್ರಚಾರ ಮಾಡುವುದರಿಂದ ಅವರ ಚರಿಷ್ಮಾದಿಂದ ಬಿಜೆಪಿ ಪರವಾಗಿ ಮತಗಳು ಒಲಿದರೆ ಜೆಡಿಎಸ್ ಅಭ್ಯರ್ಥಿಗಳಿಗೆ ಅಲ್ಪಸಂಖ್ಯಾತ ಮತಗಳು ಸ್ವಲ್ಪ ಮಟ್ಟಿಗೆ ಒಲವಾಗಬಹುದು ಎಂದು ಹೇಳಲಾಗುತ್ತಿದೆ.

ಮೊನ್ನೆ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಉಪ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಸಭೆ ನಡೆಸಿದ್ದರು. ಬೊಮ್ಮಾಯಿ ಮತ್ತು ಯಡಿಯೂರಪ್ಪನವರ ಹೊರತಾಗಿ ಹಿರಿಯ ನಾಯಕರು ಮತ್ತು ಸಂಪುಟ ಸಚಿವರು ಕೂಡ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ.

ಪಕ್ಷದ ಭವಿಷ್ಯಕ್ಕೆ ಒತ್ತು ನೀಡಲು ಬೊಮ್ಮಾಯಿಯವರು ಬಂಡಾಯ ನಾಯಕ ಚನ್ನಪ್ಪ ಆರ್ ಬಳ್ಳಾರಿಯವರು ಮನವೊಲಿಸಿದ್ದು ಅವರು ನಿನ್ನೆ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಇನ್ನು ಹಾನಗಲ್ ಕ್ಷೇತ್ರದಲ್ಲಿನ ಗೆಲುವು ಮುಖ್ಯಮಂತ್ರಿ ಬೊಮ್ಮಾಯಿಯವರ ತವರು ಜಿಲ್ಲೆಯಲ್ಲಿ ಬರುವುದರಿಂದ ಅವರಿಗೆ ಪ್ರತಿಷ್ಠೆಯ ವಿಷಯವಾಗಿದೆ.

ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮೊನ್ನೆ ಮಂಗಳವಾರ ಸಿಂದಗಿ ಕ್ಷೇತ್ರದ ಪಕ್ಷದ ಅಭ್ಯರ್ಥಿ ನಜಿಯಾ ಶಕೀಲ್ ಅಹ್ಮದ್ ಅಂಗಡಿ ಪರ ಪ್ರಚಾರ ಕಾರ್ಯ ಆರಂಭಿಸಿದರು. ಸಿಂದಗಿ ಕ್ಷೇತ್ರದಲ್ಲಿ ಈ ಹಿಂದೆ ಜೆಡಿಎಸ್ ನ ಎಂ ಸಿ ಮನಗೂಳಿ ಶಾಸಕರಾಗಿದ್ದರು. ಈ ವರ್ಷದ ಆರಂಭದಲ್ಲಿ ಅವರು ತೀರಿಕೊಂಡ ನಂತರ ಉಪ ಚುನಾವಣೆ ಅನಿವಾರ್ಯವಾಯಿತು. ಅಶೋಕ್ ಮನಗುಳಿಯವರ ಪುತ್ರ ಎಂ ಸಿ ಮನಗುಳಿಯವರನ್ನು ಪಕ್ಷಕ್ಕೆ ಕರೆದುಕೊಂಡು ಉಪ ಚುನಾವಣೆಗೆ ನಿಲ್ಲಿಸಿರುವುದರಿಂದ ಜೆಡಿಎಸ್ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕೆಂದು ಅಂದುಕೊಂಡಿದೆ. ಹಾನಗಲ್ ನಲ್ಲಿ ಜೆಡಿಎಸ್ ಹಿರಿಯ ನಾಯಕ ಹೆಚ್ ಡಿ ಕುಮಾರಸ್ವಾಮಿ ನಿಯಾಜ್ ಶೇಖ್ ಪರ ಪ್ರಚಾರ ನಡೆಸಲಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿರುವ ನಾಯಕರು, ಯಡಿಯೂರಪ್ಪನವರು ಹಾನಗಲ್ ಮತ್ತು ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಠಿಣ ಸ್ಪರ್ಧೆ ನೀಡಲು ಸಜ್ಜಾಗಿದೆ. ಬಿಜೆಪಿಯ ಅಭ್ಯರ್ಥಿ ಶಿವರಾಜ್ ಸಜ್ಜನರ್ ಮಾಜಿ ಶಾಸಕ ಉದಾಸಿ ಅವರ ಬೆಂಬಲಿಗರಾಗಿದ್ದರು.


Stay up to date on all the latest ರಾಜಕೀಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp