ಹಾನಗಲ್, ಸಿಂದಗಿ ಉಪಚುನಾವಣೆ: ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸ್ಟಾರ್ ಕ್ಯಾಂಪೇನರ್ಸ್!

ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಗೆ ಇನ್ನು 15 ದಿನಗಳಷ್ಟೇ ಬಾಕಿಯಿದ್ದು, ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷವು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದೆ.
ಸುತ್ತೂರು ಮಠದಲ್ಲಿ ಸಿಎಂ ಬೊಮ್ಮಾಯಿ
ಸುತ್ತೂರು ಮಠದಲ್ಲಿ ಸಿಎಂ ಬೊಮ್ಮಾಯಿ
Updated on

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಗೆ ಇನ್ನು 15 ದಿನಗಳಷ್ಟೇ ಬಾಕಿಯಿದ್ದು, ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷವು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹಾನಗಲ್‌ನಲ್ಲಿ ನಡೆಯಲಿರುವ ಪ್ರಚಾರದಲ್ಲಿ ಕೈಜೋಡಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಕ್ಟೋಬರ್ 21 ರ ನಂತರ ಎರಡೂ ಕ್ಷೇತ್ರಗಳಲ್ಲಿ ಸ್ಟಾರ್ ಪ್ರಚಾರಕರಾಗಿ ಕಾರ್ಯನಿರ್ವಹಿಸಲಿದ್ದಾರೆ. 

ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿಎಂ ಬೊಮ್ಮಾಯಿಯವರು, ಸಿಂದಗಿಯಲ್ಲಿ ಎರಡು ದಿನಗಳ ಕಾಲ ಪ್ರಚಾರ ನಡೆಸುವುದಾಗಿ ತಿಳಿಸಿದ್ದರು. 

ಅಕ್ಟೋಬರ್ 30 ರಂದು ನಡೆಯಲಿರುವ ರಾಜ್ಯ ಎರಡು ವಿಧಾನಸಭಾ ಕ್ಷೇತ್ರವಾಗಿರುವ ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಗೆ ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಿಂದಗಿಯಲ್ಲಿ ರಮೇಶ್ ಭೂಸನೂರ್ ಮತ್ತು ಹಾನಗಲ್ ನಲ್ಲಿ ಶಿವರಾಜ್ ಸಜ್ಜನರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. 

ಹಾನಗಲ್ ಪ್ರಚಾರ ತಂಡದ ಭಾಗವಾಗಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಎಂಎಲ್‌ಸಿ ಎನ್ ರವಿಕುಮಾರ್ ಅವರು ಮಾತನಾಡಿ, ಸಚಿವರು ಐದು ದಿನಗಳ ಕಾಲ ಪ್ರಚಾರ ಮಾಡಲಿದ್ದಾರೆ. ಯಡಿಯೂರಪ್ಪ ಅವರು ಅಕ್ಟೋಬರ್ 22 ಮತ್ತು 23 ರಂದು ಎರಡು ಕ್ಷೇತ್ರದಲ್ಲಿ ನೆಲೆಯೂರಲಿದ್ದು, ಬಳಿಕ ಸಿಂದಗಿಗೆ ತೆರಳಲಿದ್ದಾರೆಂದು ಮಾಹಿತಿ ನೀಡಿದ್ದಾರೆ. 

ಈ ಎರಡು ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಲಿಂಗಾಯತ ಮತದಾರರಿದ್ದು, ಹೀಗಾಗಿ ಪಕ್ಷವು ಯಡಿಯೂರಪ್ಪ ಅವರ ಯೋಜಿತ ರಾಜ್ಯ ಪ್ರವಾಸವನ್ನು ಉಪಚುನಾವಣೆಯವರೆಗೆ ತಡೆಹಿಡಿದಿದೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ. ಇದೇ ಕಾರಣಕ್ಕೆ ನಿನ್ನೆ ಸಿಎಂ ಬೊಮ್ಮಾಯಿಯವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮಾತುಕತೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ. 

ಪಿಡಬ್ಲ್ಯುಡಿ ಸಚಿವ ಸಿಸಿ ಪಾಟೀಲ್, ಕಳೆದ ಕೆಲವು ದಿನಗಳಿಂದ ಸಿಂದಗಿಯಲ್ಲಿ ಬಿಡಾರ ಹೂಡಿದ್ದು, ಶುಕ್ರವಾರ ಪ್ರಚಾರದಲ್ಲಿ ಕಾಣಿಸಿಕೊಂಡರು. 

ಇತ್ತೀಚೆಗೆ, ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ಕಚೇರಿಯಲ್ಲಿ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಿದರು, 

ಈ ವೇಳೆ ಸಚಿವರು ಹಾಗೂ ಸಂಸದರು ಸ್ಥಳೀಯ ನಾಯಕರು ಮತ್ತು ಸುತ್ತಮುತ್ತಲಿನ ಕ್ಷೇತ್ರಗಳ ಇತರ ಶಾಸಕರೊಂದಿಗೆ ಪ್ರಚಾರ ನಡೆಸುವಂತೆ ಸೂಚಿಸಲಾಗಿತ್ತು. 

ಬೊಮ್ಮಾಯಿ ಈ ವರ್ಷದ ಜುಲೈನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಪ್ರಮುಖ ಚುನಾವಣೆಗಳಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com