ಅಂದಿನ ಬಜರಂಗದಳ ಕಾರ್ಯಕರ್ತ ಕೋಟಿ ರವಿ ಆಗಿದ್ದು ಹೇಗೆ? ಹಿಂದುತ್ವ ಜಪದಿಂದ ಇಷ್ಟೊಂದು ಆಸ್ತಿ ಸಂಪಾದಿಸಬಹುದೇ?

ಕರ್ನಾಟಕ ಕಾಂಗ್ರೆಸ್ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಿರುದ್ಧ ಹರಿಹಾಯ್ದಿದೆ, ನಿಮ್ಮ ಸಂಬಂಧಿಯನ್ನು ಮುಂದಿಟ್ಟುಕೊಂಡು ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆಗಳನ್ನು ಪಡೆದಿರುವ ನೀವು ಎಷ್ಟೆಷ್ಟು ಕಮಿಷನ್ ಕೊಟ್ಟಿದ್ದೀರ? ಎಂದು ಪ್ರಶ್ನಿಸಿದೆ.
ಸಿಟಿ ರವಿ
ಸಿಟಿ ರವಿ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಿರುದ್ಧ ಹರಿಹಾಯ್ದಿದೆ, ನಿಮ್ಮ ಸಂಬಂಧಿಯನ್ನು ಮುಂದಿಟ್ಟುಕೊಂಡು ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆಗಳನ್ನು ಪಡೆದಿರುವ ನೀವು ಎಷ್ಟೆಷ್ಟು ಕಮಿಷನ್ ಕೊಟ್ಟಿದ್ದೀರ? ಎಂದು ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಾರಿಗೆ ಬಸ್ಸಿನಲ್ಲಿ ಓಡಾಡುತ್ತಿದ್ದ ಅಂದಿನ ಬಜರಂಗದಳ ಕಾರ್ಯಕರ್ತ, ಇಂದಿನ ಫುಲ್ ಟೈಂ ರಾಜಕಾರಣಿ ಸಿಟಿ ರವಿ ಕೋಟಿರವಿ ಆಗಿದ್ದು ಹೇಗೆ? ಎಲ್ಲಿ, ಯಾರಿಂದ, ಎಷ್ಟೆಷ್ಟು ಕಲೆಕ್ಷನ್ ಮಾಡಿದಿರಿ? ಲೂಟಿರವಿ ಎಂದು ಪ್ರಶ್ನಿಸಿದೆ.

2004-2010ರ ಮಧ್ಯೆ ನಿಮ್ಮ ಆಸ್ತಿ 49 ಲಕ್ಷದಿಂದ 3.18 ಕೋಟಿ ರು ಏರಿಕೆಯಾಗಿದೆ ಎಂಬ ದೂರು ದಾಖಲಾಗಿತ್ತು. 2018 ರಲ್ಲಿ ನೀವೇ ಘೋಷಿಸಿದ ಅಧಿಕೃತ ಆಸ್ತಿ 5 ಕೋಟಿಗೂ ಅಧಿಕ, ನಿಮ್ಮ ಕುಟುಂಬದ್ದು ಇನ್ನೂ ಅಧಿಕ, ಬೇನಾಮಿ ಅತ್ಯಧಿಕವಾಗಿದೆ ಹಿಂದುತ್ವ ಜಪದಿಂದ ಈ ಪ್ರಮಾಣದ ಆಸ್ತಿ ಸಂಪಾದಿಸಬಹುದೇ ಲೂಟಿರವಿ ಅವರೇ? ಎಂದು ಕಾಂಗ್ರೆಸ್ ಲೇವಡಿ ಮಾಡಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com