ಗಾಂಧೀಜಿಯವರನ್ನೇ ಬಿಡದವರು ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ?: ಸಿದ್ದರಾಮಯ್ಯ

ಮಹಾತ್ಮ ಗಾಂಧೀಜಿಯವರನ್ನೇ ಬಿಡದವರು ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಪ್ರಶ್ನಿಸಿದ್ದಾರೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿಯವರನ್ನೇ ಬಿಡದವರು ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಪ್ರಶ್ನಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಮಹಾತ್ಮ ಗಾಂಧೀಜಿ ಅವರನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು. ಮಹಾತ್ಮರ ಬೆನ್ನು ಬಿಡದ ಟೀಕಾಕಾರರು ನನ್ನಂಥ ಹುಲುಮಾನವರನ್ನು ಬಿಡುತ್ತಾರೆಯೇ?’ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, ‘ಸಬ್ ಕೋ ಸನ್ಮತಿ ದೇ ಭಗವಾನ್’ ಎಂಬ ಮಾತನ್ನು ಉಲ್ಲೇಖಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ನಡುವಿನ ಆರೋಪ– ಪ್ರತ್ಯಾರೋಪ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಈ ಆರೋಪಗಳ ನಡುವಲ್ಲೇ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com