ಉಪಚುನಾವಣೆಯ ಬಿಜೆಪಿ ಪ್ರಣಾಳಿಕೆ ಅರ್ಥಹೀನವಾದದ್ದು: ಡಿಕೆ.ಶಿವಕುಮಾರ್

ಹಾನಗಲ್ ಉಪಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಅರ್ಥಹೀನವಾದದ್ದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಹೇಳಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್
Updated on

ಹಾನಗಲ್: ಹಾನಗಲ್ ಉಪಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಅರ್ಥಹೀನವಾದದ್ದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಹೇಳಿದ್ದಾರೆ.

ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ವಿ ಮಾನೆ ಪರ ಪ್ರಚಾರ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿಯವರ ಪ್ರಣಾಳಿಕೆಯೇ ಅರ್ಥಹೀನವಾದದ್ದು. ಪ್ರಣಾಳಿಕೆಯಲ್ಲಿ ಮೂರ್ಖತನದ ವಿಚಾರಗಳೇ ಇವೆ.  ಕ್ಷೇತ್ರದ ನಿವಾಸಿಗಳಿಗೆ ಮೂಲಭೂತ ಅಗತ್ಯಗಳನ್ನು ಒದಗಿಸುವಲ್ಲಿ ಡಬಲ್ ಎಂಜಿನ್ ಸರ್ಕಾರ ಇದುವರೆಗೆ ವಿಫಲವಾಗಿದೆ ಎಂದು ಹೇಳಿದ್ದಾರೆ.

ಬಳಿಕ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿರುವುದರಿಂದ ಜನರು ಸಾಮಾನ್ಯ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ ಮತ್ತು ಬೆಲೆಗಳನ್ನು ನಿಯಂತ್ರಣಕ್ಕೆ ತರಲು ಸರ್ಕಾರಗಳು ವಿಫಲವಾಗಿವೆ ಎಂದು ತಿಳಿಸಿದ್ದಾರೆ.

ಈ ಬಾರಿ ಬಿಜೆಪಿಗೆ ಜನರು ಪಾಠ ಕಲಿಸುತ್ತಾರೆ, ಬಿಜೆಪಿ ಸಚಿವರು ಮತ್ತು ಸಿಎಂಗಳು ವಿಧಾನಸೌಧಕ್ಕೆ ಬೀಗ ಹಾಕಿ ಉಪಚುನಾವಣೆ ಹಿನ್ನೆಲೆಯಲ್ಲಿ ಹಾನಗಲ್ ಹಾಗೂ ಸಿಂಗದಿಯಲ್ಲಿ ಬೀಡುಬಿಟ್ಟಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

ಮಹಿಳೆಯರ ಸುರಕ್ಷತೆಯು ಕಾಳಜಿಯ ವಿಷಯವಾಗಿದೆ. “ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಣಾಸಿಯಲ್ಲಿ ಮಹಿಳೆಯರು ಏಕಾಂಗಿಯಾಗಿ ಪೊಲೀಸ್ ಠಾಣೆಗೆ ಹೋಗುವಂತಿಲ್ಲ. ಕರ್ನಾಟಕದಲ್ಲಿ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ಸರ್ಕಾರ ಮತ್ತು ಅದರ ನಾಯಕರು ದೇಶದ ಮಹಿಳೆಯರು ಮತ್ತು ರೈತರನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com