ನಂಜನಗೂಡಿನಲ್ಲಿ ದೇವಸ್ಥಾನ ನೆಲಸಮ: ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಖಂಡನೆ

ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿ ಹಾಕಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿ ಹಾಕಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ರಾಜ್ಯ ಬಿಜೆಪಿ ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು ಎಂದು ಹೇಳಿದ್ದಾರೆ. 

ನ್ಯಾಯಾಲಯದ ಆದೇಶವಿದ್ದರೂ ಅದ‌ನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವ ಮುನ್ನ ಜಿಲ್ಲಾಡಳಿತ ಪರಿಣಾಮದ ಬಗ್ಗೆ ಯೋಚನೆ ಮಾಡಬೇಕಾಗಿತ್ತು. ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆ‌ನಪಾಗಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. 

ದೇವಸ್ಥಾನ ಕೆಡವಿ ಹಾಕಿದ ಘಟನೆ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿಷ್ಪಕ್ಷಪಾತ ತನಿಖೆ‌ ನಡೆಸಿ‌ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಹೊಸ ನಿವೇಶನ ಮಂಜೂರು ಮಾಡಿ ಸರ್ವರನ್ನೂ ವಿಶ್ವಾಸಕ್ಕೆ ಪಡೆದು ನೂತನ ದೇವಸ್ಥಾನವನ್ನು ರಾಜ್ಯ ಸರ್ಕಾರವೇ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com