ಬೆಂಗಳೂರು: ಬಿಜೆಪಿ ಎಂದರೆ ಯೋಜನೆ ಮತ್ತು ಯೋಚನೆ ಇಲ್ಲದ ಗಾಂಪರ ಗುಂಪು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಲೇವಡಿ ಮಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಉದ್ಯೋಗ ಸೃಷ್ಟಿಗೆ ಕ್ರಮ ವಹಿಸದೆ ಕೇವಲ ಕೌಶಲ್ಯ ತರಬೇತಿ ನೀಡಿ ಕೌಶಲ್ಯಯುತ ನಿರುದ್ಯೋಗಿಗಳನ್ನು ಸೃಷ್ಟಿಸುವಿರಾ ಡಾ. ಅಶ್ವತ್ಥನಾರಾಯಣ ಅವರೇ? ಎಂದು ಪ್ರಶ್ನಿಸಿದೆ.
ಉದ್ಯೋಗ ಸೃಷ್ಟಿಯಲ್ಲಿ ರಾಜ್ಯ ಹಿಂದುಳಿದಿದ್ದರೂ ಕ್ರಮವಹಿಸದೆ ಯುವ ಸಮುದಾಯದ ಬದುಕನ್ನು ಕತ್ತಲೆಗೆ ತಳ್ಳುತ್ತಿದೆ ಬಿಜೆಪಿ ಕರ್ನಾಟಕ, ಉದ್ಯೋಗ ಸೃಷ್ಟಿಗಿಂತಲೂ ಕೌಶಲ ತರಬೇತಿಗೆ ಒತ್ತು ನೀಡುವುದಾಗಿ ಕೌಶಲಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿದೆ.
ರಾಜ್ಯದ ದಿಕ್ಕೆಟ್ಟ ಆರ್ಥಿಕ ಪರಿಸ್ಥಿತಿ ಸರಿದೂಗಿಸಲು ಬಿಜೆಪಿ ಸರ್ಕಾರದ ಅಬಕಾರಿ ಇಲಾಖೆ ವಿಧಾನಸೌಧದಲ್ಲಿಯೇ ಮದ್ಯದಂಗಡಿ ತೆರೆದಿರುವಂತಿದೆ, ಪ್ರಜಾಪ್ರಭುತ್ವದ ದೇಗುಲ ಎಂದು ಕರೆಸಿಕೊಳ್ಳುವ ವಿಧಾನಸೌಧದ ಆವರಣದೊಳಗೆ ಭದ್ರತೆ ಮೀರಿ ಮದ್ಯದ ಪಾರ್ಟಿ ನಡೆಯುತ್ತದೆಂದರೆ ರಾಜ್ಯದ ಕಾನೂನು ಸುವ್ಯವಸ್ಥೆಯ ದುಃಸ್ಥಿತಿಯನ್ನ ಊಹಿಸಬಹುದು ಎಂದು ಹೇಳಿದೆ.
Advertisement