ಬೆಂಗಳೂರು: ವಿಧಾನಸಬೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಭಾಷಣ ಮಾಡಿದ್ದಕ್ಕೆ ಕಾಂಗ್ರೆಸ್ ಹರಿ ಹಾಯ್ದಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಗೌರವಾನ್ವಿತ ಸದನವನ್ನು ಬಿಜೆಪಿ ಛತ್ರದಂತೆ ಭಾವಿಸಿದೆ, ನಿಯಮಗಳನ್ನ ಸದನ ಸದಸ್ಯರಲ್ಲದವರನ್ನ ಕರೆಸಿ ಭಾಷಣ ಮಾಡಿಸಿ ಯಾವ ಘನ ಕಾರ್ಯ ಸಾಧಿಸಿದೆ ಬಿಜೆಪಿ? ಎಂದು ಪ್ರಶ್ನಿಸಿದೆ.
ಹೀಗೆಯೇ ಬಿಟ್ಟರೆ ಸದನದಲ್ಲಿ ಮದುವೆ, ಮುಂಜಿಯಂತಹ ಸಮಾರಂಭಗಳನ್ನ ಮಾಡಲೂ ಬಿಜೆಪಿ ಹಿಂಜರಿಯುವುದಿಲ್ಲ! ಪ್ರಜಾಪ್ರಭುತ್ವದ ಘನತೆ ಅರಿಯದವರಿಂದ ಇನ್ನೇನು ನಿರೀಕ್ಷಿಸಲಾದೀತು? ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
Advertisement