ಗಡಿ ಸಮಸ್ಯೆ ಉಭಯ ರಾಜ್ಯಗಳ ಬಿಜೆಪಿ ಸರ್ಕಾರದ ಪಿತೂರಿ, ರಾಜಕೀಯ ಕಣ್ಣಾಮುಚ್ಚಾಲೆ: ಡಿಕೆ ಶಿವಕುಮಾರ್

ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಉದ್ಭವಿಸಿರುವ ಗಡಿ ಸಮಸ್ಯೆ ಉಲ್ಬಣಕ್ಕೆ ಉಭಯ ರಾಜ್ಯಗಳ ಬಿಜೆಪಿ ಸರ್ಕಾರವೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಉದ್ಭವಿಸಿರುವ ಗಡಿ ಸಮಸ್ಯೆ ಉಲ್ಬಣಕ್ಕೆ ಉಭಯ ರಾಜ್ಯಗಳ ಬಿಜೆಪಿ ಸರ್ಕಾರವೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, 'ಯಾವುದೇ ಗಡಿ ಸಮಸ್ಯೆ ಇಲ್ಲ, ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಸಮಸ್ಯೆ ಸೃಷ್ಟಿಸಿದ್ದೇ ಅವರ ಟ್ರಿಪಲ್ ಎಂಜಿನ್ ಸರ್ಕಾರ. ಮಹಾರಾಷ್ಟ್ರ, ಕರ್ನಾಟಕ ಮತ್ತು ಕೇಂದ್ರದಲ್ಲಿ ಅವರ ಬಿಜೆಪಿ ಸರ್ಕಾರಗಳಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವರನ್ನು ಮಾತನಾಡುವಂತೆ ಮಾಡಿದ್ದು, ಕೆಲವು ಸೂತ್ರಗಳೊಂದಿಗೆ ಹೊರಬರುವಂತೆ ಮಾಡಿದರು ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಮಹಾರಾಷ್ಟ್ರಕ್ಕೆ ಒಂದೇ ಒಂದು ಗ್ರಾಮ ಅಥವಾ ಒಂದು ಇಂಚು ಭೂಮಿ ಕೂಡ ನೀಡುವುದಿಲ್ಲ. ಮಹಾರಾಷ್ಟ್ರ ಕೂಡ ನಮ್ಮೊಂದಿಗೆ ಇಂತಹ ಪ್ರಯತ್ನ ಮಾಡುವುದಿಲ್ಲ. ಆದರೆ ಅವರು ರಾಜಕೀಯ ಕಣ್ಣಾಮುಚ್ಚಾಲೆ ಆಡುತ್ತಿದ್ದು, ವಿವಾದವನ್ನು ಹಸಿರಾಗಿರಿಸಲು ಯತ್ನಿಸುತ್ತಿದ್ದಾರೆ.  ಬಿಜೆಪಿ ಸಂಸದರು ಮತ್ತು ಶಾಸಕರಿಗೆ ತಮ್ಮ ಹೈಕಮಾಂಡ್ ಮುಂದೆ ಮಾತನಾಡುವ ಧೈರ್ಯವಿಲ್ಲ. ವಿಷಯವನ್ನು ಬಗೆಹರಿಸಲು ಅವರು ಇನ್ನೂ ನಿಯೋಗದಲ್ಲಿ ಹೋಗಬೇಕಾಗಿದೆ. ಇಡೀ ಮಹಾರಾಷ್ಟ್ರ ಸರ್ಕಾರವು ಕರ್ನಾಟಕ ಮತ್ತು ಅದರ ಜನರ ಭಾವನೆಗಳನ್ನು ನೋಯಿಸುತ್ತಿದೆ. ಗಡಿ ಸೀಲ್ ಮಾಡಲಾಗಿದೆ. ಇದಾಗಬಾರದು ಎಂದು ಡಿಕೆ ಶಿವಕುಮಾರ್ ಹೇಳಿದರು.

ಸರಣಿ ಟ್ವೀಟ್ ಮಾಡಿ ಆಕ್ರೋಶ
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿರುವ ನಿರ್ಣಯವನ್ನು ಖಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿ, ಕರ್ನಾಟಕದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂಬ ಮಾತಿಗೆ ಡಿ.ಕೆ‌ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್ "ಮುಖ್ಯಮಂತ್ರಿಗಳು ಈ ರೀತಿ ಪೊಳ್ಳು ಹೇಳಿಕೆಗಳನ್ನು ನೀಡುತ್ತಿರುವುದು ಆಶ್ಚರ್ಯಕರವೇನಲ್ಲ" ರಾಜ್ಯದ ಒಂದಿಂಚು ಜಾಗವನ್ನೂ ಬಿಟ್ಟುಕೊಡಲು ಮುಖ್ಯಮಂತ್ರಿ ಬೊಮ್ಮಾಯಿಯವರು ಸಿದ್ಧರಿಲ್ಲದಿದ್ದರೆ, ಇಷ್ಟರಲ್ಲಾಗಲೇ ಕ್ರಮ ಕೈಗೊಳ್ಳಬೇಕಿತ್ತು ಎಂದಿರುವ ಅವರು, "ರಾಜ್ಯದ ಒಂದಿಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲು ಅವರು ನಿಜಕ್ಕೂ ತಯಾರಿಲ್ಲದಿದ್ದರೆ ತಕ್ಷಣವೇ ಸರ್ವಪಕ್ಷ ನಿಯೋಗವನ್ನು ದಿಲ್ಲಿಗೆ ಕರೆದುಕೊಂಡು ಹೋಗಲಿ ಹಾಗೆಯೇ ಕೇಂದ್ರ ಗೃಹ ಸಚಿವರು ಈ ವಿಷಯದ ಬಗ್ಗೆ ಸಾರ್ವಜನಿಕ ಭರವಸೆ ನೀಡಲಿ" ಎಂದು ಸವಾಲೆಸೆದಿದ್ದಾರೆ.

ಈ‌ ಮೂಲಕ ಬೊಮ್ಮಾಯಿಯವರ ಪೊಳ್ಳು ಭರವಸೆಗಳ ಕುರಿತು ತೀವ್ರ ಅಸಮಾಧಾನ ಹೊರಹಾಕಿರುವ ಡಿ.ಕೆ ಶಿವಕುಮಾರ್, ಕೇಂದ್ರ ಗೃಹ ಸಚಿವರು ಸಾರ್ವಜನಿಕ‌ ಭರವಸೆ ನೀಡುವಂತೆ ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com