ಕರ್ನಾಟಕ ವಿಧಾನಸಭಾ ಚುನಾವಣೆ 2023: ದೆಹಲಿಯಲ್ಲಿ ಜಮೀರ್ ಭೇಟಿಯಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಾಜಿ ಸಚಿವ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರನ್ನು ಬುಧವಾರ ನವದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ರಂದೀಪ್ ಸಿಂಗ್ ಸುರ್ಜೇವಾಲಾ
ರಂದೀಪ್ ಸಿಂಗ್ ಸುರ್ಜೇವಾಲಾ
Updated on

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಾಜಿ ಸಚಿವ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರನ್ನು ಬುಧವಾರ ನವದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿದ ಸುರ್ಜೇವಾಲಾ ಅವರು, 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ. ಅಲ್ಪಸಂಖ್ಯಾತ ಮತದಾರರನ್ನು ಪಕ್ಷಕ್ಕೆ ಒಲಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆ ಚರ್ಚಿಸಿದರು ಎಂದು ಹೇಳಲಾಗುತ್ತಿದೆ.

ಸುರ್ಜೇವಾಲಾ ಅವರನ್ನು ಭೇಟಿಯಾದ ಕೂಡಲೇ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಇದೊಂದು ಸೌಜನ್ಯದ ಭೇಟಿ ಎಂದು ಹೇಳಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ಆಯೋಜಿಸಿದ್ದ ಹಲವಾರು ಕಾರ್ಯಕ್ರಮಗಳಲ್ಲಿ ಜಮೀರ್ ಗೈರುಹಾಜರಾಗಿದ್ದರಿಂದ ಈ ಸಭೆಗಳು ಮಹತ್ವ ಪಡೆದುಕೊಂಡಿದೆ.

ಮೂಲಗಳ ಪ್ರಕಾರ, ಸುರ್ಜೆವಾಲಾ ಅವರು, ಜಮೀರ್ ಅವರ ಆಸ್ತಿಪಾಸ್ತಿಗಳ ಮೇಲೆ ಇಡಿ ದಾಳಿ ನಡೆಸಿದ ನಂತರ ಅಸಮಾಧಾನಗೊಂಡಿದ್ದರಿಂದ ಅವರ ನೈತಿಕತೆಯನ್ನು ಹೆಚ್ಚಿಸಲು ಅವರನ್ನು ಭೇಟಿಯಾದರು ಎಂದು ಹೇಳಲಾಗುತ್ತಿದೆ.

ಉದ್ಯಮ ಪ್ರವಾಸದ ಭಾಗವಾಗಿ ಶಾಸಕ ರೋಹಿತ್ ರೆಡ್ಡಿ ಅವರನ್ನು ಭೇಟಿ ಮಾಡುತ್ತೇನೆಂದು ಹೇಳಿದ್ದ ಜಮೀರ್ ಅವರು, ಈ ನೆಪದಲ್ಲಿ ಹೈದರಾಬಾದ್‌ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರನ್ನು ಭೇಟಿ ಮಾಡಿದ್ದರು.

ಇತ್ತೀಚೆಗೆ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷದ ಚುನಾವಣಾ ಸಮಿತಿಯ ಪಟ್ಟಿಯಲ್ಲಿ ಜಮೀರ್ ಅವರನ್ನು ಸೇರಿಸಿ ಗದಗ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com