ಕ್ಷೇತ್ರದ ಜನರನ್ನು ಕೇಳಿಕೊಂಡು ಇನ್ನೆರಡು ತಿಂಗಳಲ್ಲಿ ನನ್ನ ಮುಂದಿನ ರಾಜಕೀಯ ನಿರ್ಧಾರ: ಜಿ ಟಿ ದೇವೇಗೌಡ

ಜಾತ್ಯತೀತ ಜನತಾದಳದಲ್ಲಿ ಶಾಸಕನಾಗಿದ್ದೇನೆ, ಆದರೆ ಕಳೆದ ಮೂರು ವರ್ಷಗಳಿಂದ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ, ಕಾರ್ಯಕ್ರಮಗಳಲ್ಲಿ ಭಾಗವಹಿಸಿಲ್ಲ. ನನ್ನ ಕ್ಷೇತ್ರದ ಕೆಲಸ ಮಾತ್ರ ಶಾಸಕನಾಗಿ ಮಾಡುತ್ತಿದ್ದೇನೆ. ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನರ ಆದೇಶದಂತೆ ಆತ್ಮಸಾಕ್ಷಿಯಂತೆ ಜೆಡಿಎಸ್ ಗೆ ಮತ ಕೊಟ್ಟಿದ್ದೇನೆ ಎಂದು ಶಾಸಕ ಜಿ ಟಿ ದೇವೇಗೌಡ ಹೇಳಿದ್ದಾರೆ. 
ಜಿ ಟಿ ದೇವೇಗೌಡ
ಜಿ ಟಿ ದೇವೇಗೌಡ
Updated on

ಮೈಸೂರು: ಜಾತ್ಯತೀತ ಜನತಾದಳದಲ್ಲಿ ಶಾಸಕನಾಗಿದ್ದೇನೆ, ಆದರೆ ಕಳೆದ ಮೂರು ವರ್ಷಗಳಿಂದ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ, ಕಾರ್ಯಕ್ರಮಗಳಲ್ಲಿ ಭಾಗವಹಿಸಿಲ್ಲ. ನನ್ನ ಕ್ಷೇತ್ರದ ಕೆಲಸ ಮಾತ್ರ ಶಾಸಕನಾಗಿ ಮಾಡುತ್ತಿದ್ದೇನೆ. ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನರ ಆದೇಶದಂತೆ ಆತ್ಮಸಾಕ್ಷಿಯಂತೆ ಜೆಡಿಎಸ್ ಗೆ ಮತ ಕೊಟ್ಟಿದ್ದೇನೆ ಎಂದು ಶಾಸಕ ಜಿ ಟಿ ದೇವೇಗೌಡ ಹೇಳಿದ್ದಾರೆ. 

ನನ್ನ ಮುಂದಿನ ರಾಜಕೀಯ ನಿರ್ಧಾರವನ್ನು ಕ್ಷೇತ್ರದ ಜನರನ್ನು ಕೇಳಿಕೊಂಡು ಕೈಗೊಳ್ಳುತ್ತೇನೆ, ಕ್ಷೇತ್ರದ ಜನರು ಹೇಳಿದಂತೆ ಕೇಳುತ್ತೇನೆ ಎಂದರು.

ಕ್ಷೇತ್ರದಲ್ಲಿ ಆಗಬೇಕಾದ ಕೆಲಸಗಳು,ಬಿಡುಗಡೆಯಾಗಬೇಕಾದ ಅನುದಾನಗಳ ಬಗ್ಗೆ ಅಧಿಕಾರಿಗಳು, ಕುಂಠಿತವಾಗಿರುವ ಕ್ಷೇತ್ರಗಳ ಬಗ್ಗೆ ಬಂದಿರುವ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸುತ್ತೇನೆ ಎಂದರು. 

ಸಿದ್ದರಾಮಯ್ಯನವರಿಗೆ ಒಳ್ಳೆಯದಾಗಲಿ: ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಮೊದಲೇ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತೇನೆ. ಯಾವುದೇ ಪಕ್ಷದ ನಾಯಕರಾದರೂ ಪಕ್ಷಾತೀತವಾಗಿ ಶುಭಾಶಯಗಳನ್ನು ಕೋರುತ್ತೇವೆ. ಅವರಿಗೆ ದೇವರು ಇನ್ನಷ್ಟು ಆಯುರಾರೋಗ್ಯ, ಐಶ್ವರ್ಯ ನೀಡಲಿ ಎಂದು ಕೋರುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com