ಮೀಸಲಾತಿ ಹೆಚ್ಚಳ ಬೇಡಿಕೆ: ಎಷ್ಟು ಸಲ ನೀನು ರಾಜೀನಾಮೆ ಕೊಡ್ತಿಯಾ? – ರಾಮುಲುಗೆ ಬಿಎಸ್‌ವೈ ಬುದ್ಧಿವಾದ!

ಸಚಿವ ಬಿ. ಶ್ರೀರಾಮುಲು ಅವರು ಎಸ್ ಟಿ ಮೀಸಲಾತಿ ಹೆಚ್ಚಳ ಮಾಡದಿದ್ದರೆ ರಾಜೀನಾಮೆ ನೀಡುವುದಾಗಿ ಪದೇ ಪದೇ ಹೇಳುತ್ತಿರುವುದಕ್ಕೆ ಶುಕ್ರವಾರ ನಡೆದ ಬಿಜೆಪಿ ಚಿಂತನಾ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಸಚಿವ ಶ್ರೀರಾಮುಲು
ಸಚಿವ ಶ್ರೀರಾಮುಲು
Updated on

ಬೆಂಗಳೂರು: ಸಚಿವ ಬಿ. ಶ್ರೀರಾಮುಲು ಅವರು ಎಸ್ ಟಿ ಮೀಸಲಾತಿ ಹೆಚ್ಚಳ ಮಾಡದಿದ್ದರೆ ರಾಜೀನಾಮೆ ನೀಡುವುದಾಗಿ ಪದೇ ಪದೇ ಹೇಳುತ್ತಿರುವುದಕ್ಕೆ ಶುಕ್ರವಾರ ನಡೆದ ಬಿಜೆಪಿ ಚಿಂತನಾ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಸಂಬಂಧ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿನ್ನೆ ನಡೆದ ಬಿಜೆಪಿ ಚಿಂತನಾ ಸಭೆಯಲ್ಲಿ ಶ್ರೀರಾಮುಲು ಅವರಿಗೆ ಬುದ್ದಿವಾದ ಹೇಳಿದ್ದಾರೆ. ಎಷ್ಟು ಸಲ ಅಂತ ನೀನು ರಾಜೀನಾಮೆ ಕೊಡ್ತಿಯಾ? ನೀನು ಈ ರೀತಿ ಹೇಳಿದರೆ ಪಕ್ಷದ ಇಮೇಜ್ ಏನಾಗಬೇಕು? ನೀನು ಸರ್ಕಾರದಲ್ಲಿ ಹಿರಿಯ ಸಚಿವನಾಗಿದ್ದೀಯಾ? ಸಚಿವನಾಗಿ ನಿನಗೂ ಜವಾಬ್ದಾರಿ ಇದೆ. ಇನ್ನು ಮುಂದೆ ಆ ರೀತಿಯ ಹೇಳಿಕೆಗಳನ್ನು ಕೊಡಬೇಡ. ಅದರಿಂದ ಸರ್ಕಾರದ ಇಮೇಜ್ ಗೆ ಧಕ್ಕೆಯಾಗುತ್ತದೆ ಎಂದಿದ್ದಾರೆ.

ಬಳಿಕ, ಸಚಿವ ಶ್ರೀರಾಮುಲು, ಯಡಿಯೂರಪ್ಪ ಅವರ ಮಾತಿಗೆ ತಪ್ಪಾಯ್ತು ಎಂದು ಕ್ಷಮೆಯಾಚಿಸಿದರು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com