ಬಿಜೆಪಿ ನಾಯಕರ ಪ್ರಚೋದನಕಾರಿ ಹೇಳಿಕೆಗಳಿಂದ ಈ ರೀತಿಯ ಹತ್ಯೆ ಆಗುತ್ತಿದೆ: ದಿನೇಶ್ ಗುಂಡೂರಾವ್

ಬಿಜೆಪಿಯವರಿಗೆ ಸಾವಿನ ಮನೆ ರಾಜಕಾರಣ ಮಾಡೋದು ಇನ್ನೂ ತಪ್ಪಿಲ್ಲ. ಅವರ ಪಕ್ಷದ ಕಾರ್ಯಕರ್ತರು ಅವರ ಮೇಲೆ ತಿರುಗಿ ಬಿದ್ದಿದರಿಂದ ಈಗ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್...
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Updated on

ಬೆಂಗಳೂರು: ಬಿಜೆಪಿಯವರಿಗೆ ಸಾವಿನ ಮನೆ ರಾಜಕಾರಣ ಮಾಡೋದು ಇನ್ನೂ ತಪ್ಪಿಲ್ಲ. ಅವರ ಪಕ್ಷದ ಕಾರ್ಯಕರ್ತರು ಅವರ ಮೇಲೆ ತಿರುಗಿ ಬಿದ್ದಿದರಿಂದ ಈಗ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರು ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಮೇಲೆ‌ ಗೂಬೆ ಕೂರಿಸುವ ಕೆಲಸ ಬಿಟ್ಟು ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಜನೋತ್ಸವ ಕಾರ್ಯಕ್ರಮ ರದ್ದು ಮಾಡಿದ್ದು ಅವರಿಗೆ ಬಿಟ್ಟಿದ್ದು. ಆದರೆ ಪ್ರಚೋದನಕಾರಿ ಹೇಳಿಕೆ ಕೊಟ್ಟು, ಕೊಟ್ಟು ಬಲಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ತೇಜಸ್ವಿ ಸೂರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರ ಮನೆ ಮೇಲೆ‌ ಅವರೇ ಕಲ್ಲು ಹೊಡೆದುಕೊಳ್ಳಬೇಕು. ಈ ಹಿಂದೆ ಈ ರೀತಿಯ ಸಾವು ಆಗಲಿ ಎಂದು ಕಾದು ಕುಳಿತಿದ್ದರು. ಹಿಂದೆ ವೈಯಕ್ತಿಕ ಸಾವುಗಳನ್ನು ರಾಜಕೀಯ ದ್ವೇಷ‌ದ ಸಾವುಗಳಾಗಿ ಮಾಡಿದ್ರು. ಹತ್ಯೆಗಳು ಎಲ್ಲಾ ಸರ್ಕಾರದಲ್ಲೂ ಆಗಿವೆ. ಆದರೆ ಹತ್ಯೆಗಳಲ್ಲಿ ರಾಜಕಾರಣ ಮಾಡಬಾರದು. ರಾಜಕಾರಣ ಮಾಡಿದ್ರೆ ಅವರದ್ದೆ ಪಕ್ಷದ ಕಾರ್ಯಕರ್ತರು ಬಲಿಯಾಗುತ್ತಿದ್ದಾರೆ. ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ನಾಯಕರ ಪ್ರಚೋದನೆಕಾರಿ ಹೇಳಿಕೆಗಳಿಂದ ಈ ರೀತಿಯ ಹತ್ಯೆ ಆಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com