ಸಚಿವ ಗೋಪಾಲಯ್ಯ
ಸಚಿವ ಗೋಪಾಲಯ್ಯ

ಸೋಲಿನ ಭಯದಿಂದ ಕ್ಷೇತ್ರ ಬದಲಾಯಿಸಲು ಸಿದ್ದರಾಮಯ್ಯ ನಿರ್ಧಾರ: ಸಚಿವ ಗೋಪಾಲಯ್ಯ

2023ರ ವಿಧಾನಸಭಾ ಚುನಾವಣೆಗೆ ಸೋಲಿನ ಭಯದಿಂದ ಕ್ಷೇತ್ರವನ್ನು ಬದಲಾಯಿಸಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಸೋಮವಾರ ಹೇಳಿದ್ದಾರೆ.
Published on

ಹಾಸನ: 2023ರ ವಿಧಾನಸಭಾ ಚುನಾವಣೆಗೆ ಸೋಲಿನ ಭಯದಿಂದ ಕ್ಷೇತ್ರವನ್ನು ಬದಲಾಯಿಸಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ಹಿಂದಿನಂತೆಯೇ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದು ಉತ್ತಮವಾಗಿದ್ದು, ನೀಡಿದ ಭರವಸೆಯಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಮತದಾರರಿಗೆ ನ್ಯಾಯ ಒದಗಿಸಬೇಕು’ ಎಂದು ಹೇಳಿದರು.

ಇದೇ ವೇಳೆ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡ ಅವರಿಗೆ ಆಹ್ವಾನ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ದೇವೇಗೌಡರಿಗೆ ಗೌರವ ಸಲ್ಲಿಸಿ ಆಮಂತ್ರಣ ಪತ್ರ ಕಳುಹಿಸಲಾಗಿತ್ತು. ಮಾಜಿ ಪ್ರಧಾನಮಂತ್ರಿಗಳೊಂದಿಗೆ ದೂರವಾಣಿ ಕರೆಯಲ್ಲೂ ಮಾತನಾಡಲಾಗಿತ್ತು. ಈ ವಿಚಾರದಲ್ಲಿ ನನಗೆ ಯಾವುದೇ ತಪ್ಪುಗಳೂ ಕಂಡಿಲ್ಲ ಎಂದರು ತಿಳಿಸಿದರು.

ಬಳಿಕ ಬಿಜೆಪಿಯಿಂದ ಯಾವುದೇ ಸಚಿವರು ಅಥವಾ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯಲ್ಲಿ ಎಲ್ಲಾ ಸಚಿವರು ಸಂತೋಷವಾಗಿದ್ದಾರೆ. 2023ರ ವಿಧಾನಸಭಾ ಚುನಾಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com