ಸಾಮಾಜಿಕ ನ್ಯಾಯ ವಿಚಾರ ಹಿಡಿದು ದಲಿತರು-ಹಿಂದುಳಿದ ಜನರ ಮನಗೆಲ್ಲಲು ಸಿಎಂ ಬೊಮ್ಮಾಯಿ ಯತ್ನ!

ಕರ್ನಾಟಕ ಚುನಾವಣೆಯತ್ತ ಬಿಜೆಪಿ ಗಮನ ಹರಿಸಿದ್ದು, ಸಮಾಜದ ವಿವಿಧ ಸಮುದಾಯಗಳ ಮತದಾರರನ್ನು ಸೆಳೆಯಲು ಬಿಜೆಪಿ ಪದೇ ಪದೇ ರ್ಯಾಲಿಗಳನ್ನು ಆಯೋಜಿಸುತ್ತಿದೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಮೈಸೂರು: ಕರ್ನಾಟಕ ಚುನಾವಣೆಯತ್ತ ಬಿಜೆಪಿ ಗಮನ ಹರಿಸಿದ್ದು, ಸಮಾಜದ ವಿವಿಧ ಸಮುದಾಯಗಳ ಮತದಾರರನ್ನು ಸೆಳೆಯಲು ಬಿಜೆಪಿ ಪದೇ ಪದೇ ರ್ಯಾಲಿಗಳನ್ನು ಆಯೋಜಿಸುತ್ತಿದೆ.

ದಲಿತರು ಮತ್ತು ಹಿಂದುಳಿದ ವರ್ಗಗಳ ಮನಗೆಲ್ಲಲು ಪಕ್ಷವು ಇದೀಗ ಸಾಮಾಜಿಕ ನ್ಯಾಯ ವಿಚಾರವನ್ನು ಬಳಸಿಕೊಳ್ಳಲು ಮುಂದಾಗಿದೆ.

ಸೋಮವಾರ ಮೈಸೂರಿಗೆ ಆಗಮಿಸಿದ್ದ ಸಿಎಂ ಬೊಮ್ಮಾಯಿ ಅವರು ನಂಜನಗೂಡು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ಸರಣಿಗೆ ಚಾಲನೆ ನೀಡಿ 2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸುವುದಾಗಿ ಹೇಳಿದರು.

ಬಳಿಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೆಸರನ್ನು ತೆಗೆದುಕೊಳ್ಳದೆ ವಾಗ್ದಾಳಿ ನಡೆಸಿದರು. ಕೆಲವು ನಾಯಕರು ಸಾಮಾಜಿಕ ನ್ಯಾಯವನ್ನು ತಮ್ಮ ಘೋಷಣೆಯನ್ನಾಗಿ ಮಾಡಿಕೊಂಡಿದ್ದಾರೆ, ಆದರೆ ಬಿಜೆಪಿಯು ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಯನ್ನು ನಂಬಿರುವುದರಿಂದ ಅದನ್ನು ಉತ್ಸಾಹದಿಂದ ಜಾರಿಗೆ ತರುತ್ತಿದೆ ಎಂದು ಹೇಳಿದರು. ಪ್ರತಿಪಕ್ಷಗಳು ಜನರನ್ನು ಮತಬ್ಯಾಂಕ್ ಎಂದು ಪರಿಗಣಿಸಿದರೆ, ಬಿಜೆಪಿ ಮತದಾರರಿಗೆ ಕೃತಜ್ಞತೆಯ ಭಾವನೆಯನ್ನು ಹೊಂದಿದೆ ಎಂದು ಹೇಳಿದರು.

ಸರ್ಕಾರವು ಎಲ್ಲಾ ಸಮುದಾಯಗಳ ನಾಡಿಮಿಡಿತ ಮತ್ತು ಆಕಾಂಕ್ಷೆಗಳನ್ನು ಅನುಭವಿಸುತ್ತದೆ ಮತ್ತು ಅವರ ಜೀವನ ಸ್ಥಿತಿಯನ್ನು ಸುಧಾರಿಸಲು ಮತ್ತು ಮುಖ್ಯವಾಹಿನಿಗೆ ತರಲು ಬಯಸುತ್ತದೆ ಎಂದು ತಿಳಿಸಿದರು.

"ನಾವು SC/ST ಗಳಿಗೆ ಮೀಸಲಾತಿಯನ್ನು ಹೆಚ್ಚಿಸುವ ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದ್ದೇವೆ ಮತ್ತು ಶಿಕ್ಷಣ ಕೇಂದ್ರಗಳಲ್ಲಿ 100 ಅಂಬೇಡ್ಕರ್ ಹಾಸ್ಟೆಲ್‌ಗಳು ಮತ್ತು ಮೆಗಾ ಹಾಸ್ಟೆಲ್‌ಗಳನ್ನು ನಿರ್ಮಿಸುವ ಮೂಲಕ ಶಿಕ್ಷಣವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತೇವೆ" ಎಂದರು.

80 ಕೋಟಿ ರೂ.ಗಳ ನುಗು ಏತ ನೀರಾವರಿ ಯೋಜನೆ ಮತ್ತು ಕೆರೆ ತುಂಬಿಸುವ ಯೋಜನೆಗಳನ್ನು ಸರಕಾರ ಆರಂಭಿಸಿದೆ ಎಂದು ತಿಳಿಸಿದರು.

ಇದೇ ವೇಳೆ ಬರಪೀಡಿತ ಬದನವಾಳು ಪ್ರದೇಶವನ್ನು ಕೂಡ ಗ್ರಾಮಸ್ಥರಿಗೆ ಕುಡಿಯುವ ನೀರು ಒದಗಿಸುವ ಯೋಜನೆಗಳ ವ್ಯಾಪ್ತಿಗೆ ತರಲಾಗುತ್ತದೆ ಎಂದು ಅವರು ಘೋಷಿಸಿದರು.

ನಂಜನಗೂಡಿನ ಸಮಾನತೆ ಸಂಕೀರ್ಣಕ್ಕೆ ಸರ್ಕಾರವು ಎಲ್ಲಾರೀತಿಯ ಬೆಂಬಲವನ್ನು ನೀಡುತ್ತದೆ. ದೇವಾಲಯದ ಪಟ್ಟಣ ನಂಜನಗೂಡಲ್ಲಿ ಪ್ರಮುಖ ಪ್ರವಾಸೋದ್ಯಮ ಮತ್ತು ಧಾರ್ಮಿಕ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

ನೀರಾವರಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಕಾವೇರಿ ಜಲಾನಯನ ಪ್ರದೇಶದಲ್ಲಿನ ಕಾಮಗಾರಿಗಾಗಿ ಸರ್ಕಾರ 5,700 ಕೋಟಿ ರೂ. ಖರ್ಚು ಮಾಡಿದ್ದು, 450 ಕೋಟಿ ರೂ. ವೆಚ್ಚದಲ್ಲಿ 618 ಕೆರೆಗಳನ್ನು ಬಲಪಡಿಸಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com