ಉಡುಪಿ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಿಂದ ಅವರ ದೇಹದ ಫಿಟ್ನೆಸ್ ಪ್ರದರ್ಶನವಾಗುತ್ತಿದೆ. ದೇಶದ ನೇತೃತ್ವ ವಹಿಸಲು ರಾಹುಲ್ ಗೆ ಸಾಧ್ಯಾನಾ? ಪಕ್ಷದ ನೇತೃತ್ವ ವಹಿಸದವರಿಗೆ ದೇಶದ ನೇತೃತ್ವ ವಹಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಮೋದಿಗೆ ಸರಿಸಾಟಿಯಾಗುವ ರಾಹುಲ್ ಕನಸು ಎಂದಿಗೂ ನನಸಾಗುವುದಿಲ್ಲ. ದೇಹದ ಫಿಟ್ನೆಸ್ ಇದ್ದರೆ ಮೆಂಟಲ್ ಫಿಟ್ನೆಸ್ ಇದೆಯಾ? ದೇಶ ಆಳಲು ಮೆಂಟಲ್ ಫಿಟ್ನೆಸ್ ಇದ್ದಾರಾ ಅನ್ನುವುದನ್ನು ದೇಶದ ಜನ ತೀರ್ಮಾನ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.
ಇದೇ ವೇಳೆ ಹಿಜಾಬ್ ಹೋರಾಟದ ಕುರಿತಾಗಿಯೂ ಪ್ರತಿಕ್ರಿಯೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ, ಮುಸ್ಲಿಂ ಹೆಣ್ಮಕ್ಕಳಿಗೆ ಶಿಕ್ಷಣ, ಉದ್ಯೋಗ ಸಿಗಬೇಕು, ಸ್ವಂತ ಕಾಲಲ್ಲಿ ನಿಲ್ಲಬೇಕು. ಗಂಡಸರು ಹಾಕಿದ ತಾಳಕ್ಕೆ ಕುಣಿದು, ನಿಮ್ಮ ಇಚ್ಛೆಗೆ ವಿರುದ್ಧವಾಗಿ ನಡೆಯಬೇಡಿ. ಈಗಲಾದರೂ ಅರ್ಥ ಮಾಡಿಕೊಳ್ಳಿ ಎಂದು ಹಿಜಾಬ್ ಪರ ಹೋರಾಟದಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಯರಲ್ಲಿ ಮನವಿ ಮಾಡಿದರು.
Advertisement