ಆನಂದ್ ಮಾಮನಿ ನಿಧನ: ಕಲಬುರಗಿ ಜನಸಂಕಲ್ಪ ಸಮಾವೇಶ ರದ್ದುಗೊಳಿಸಲು ಸಿಎಂ ಆದೇಶ

ವಿಧಾನಸಭೆ ಡೆಪ್ಯುಟಿ ಸ್ಪೀಕರ್​ ಆನಂದ್ ಮಾಮನಿ ನಿಧನ ಹಿನ್ನೆಲೆ ಇಂದು ಕಲಬುರಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ‘ಜನಸಂಕಲ್ಪ’ ಸಮಾವೇಶ ರದ್ದು ಮಾಡಲಾಗಿದೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ವಿಧಾನಸಭೆ ಡೆಪ್ಯುಟಿ ಸ್ಪೀಕರ್​ ಆನಂದ್ ಮಾಮನಿ ನಿಧನ ಹಿನ್ನೆಲೆ ಇಂದು ಕಲಬುರಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ‘ಜನಸಂಕಲ್ಪ’ ಸಮಾವೇಶ ರದ್ದು ಮಾಡಲಾಗಿದೆ.

ಸಿಎಂ ಸಚಿವಾಲಯದ ಅಧಿಕಾರಿಗಳಿಗೆ ಕಲಬುರಗಿ ಪ್ರವಾಸ ರದ್ದುಪಡಿಸಲು ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ. ಆಳಂದ ಹಾಗೂ ಚಿತ್ತಾಪುರ ಪಟ್ಟಣಗಳಲ್ಲಿ ಇಂದು ಜನಸಂಕಲ್ಪ ಯಾತ್ರೆ ನಡೆಯಬೇಕಿತ್ತು. ಈಗಾಗಲೇ ವೇದಿಕೆ ಸೇರಿದಂತೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ನಾಳೆ ಕಲಬುರಗಿ ಜಿಲ್ಲೆಗೆ ಸಮಯ ನೀಡುವಂತೆ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ.

ಇನ್ನು ಇಂದಿನಿಂದ 3 ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಬೇಕಿತ್ತು. ಆದರೆ ಆನಂದ್ ಮಾಮನಿ ವಿಧಿವಶ ಹಿನ್ನೆಲೆ ಉತ್ಸವ ರದ್ದಾಗುತ್ತಾ? ಮುಂದೂಡಲಾಗುತ್ತಾ ಎಂದು ರಾಜ್ಯ ಸರ್ಕಾರದ ನಿರ್ಧಾರಕ್ಕಾಗಿ ಬೆಳಗಾವಿ ಜಿಲ್ಲಾಡಳಿತ ಕಾಯುತ್ತಿದೆ.

ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಕಿತ್ತೂರು ಉತ್ಸವಕ್ಕೆ ನಿರ್ಧರಿಸಲಾಗಿತ್ತು. ಇಂದು ಸಂಜೆ ಆಯೋಜಿಸಿದ್ದ ಕಿತ್ತೂರು ಉತ್ಸವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಬೇಕಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com