ಸಿದ್ದರಾಮೋತ್ಸವ ಯಶಸ್ಸಿನ ಎಫೆಕ್ಟ್: ಕಾಂಗ್ರೆಸ್‌ಗೆ ಉತ್ತೇಜನ ನೀಡಲು ಸರಣಿ ರ್ಯಾಲಿಗೆ ಚಿಂತನೆ!!

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನದಂದು ನಡೆದ ಸಿದ್ದರಾಮೋತ್ಸವ ಪಕ್ಷದ ಕಾರ್ಯಕರ್ತರಿಗೆ ಅಗತ್ಯವಾದ ಉತ್ತೇಜನ ನೀಡಿದ್ದು, ಇದೇ ಹುಮ್ಮಸ್ಸಿನಲ್ಲಿ ಕಾಂಗ್ರೆಸ್ ಪಕ್ಷ ಸರಣಿ ರ್ಯಾಲಿಗಳನ್ನು ಆಯೋಜಿಸುವ ಯೋಜನೆಯಲ್ಲಿದೆ.
ಸಿದ್ದರಾಮೋತ್ಸವ (ಸಂಗ್ರಹ ಚಿತ್ರ)
ಸಿದ್ದರಾಮೋತ್ಸವ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನದಂದು ನಡೆದ ಸಿದ್ದರಾಮೋತ್ಸವ ಪಕ್ಷದ ಕಾರ್ಯಕರ್ತರಿಗೆ ಅಗತ್ಯವಾದ ಉತ್ತೇಜನ ನೀಡಿದ್ದು, ಇದೇ ಹುಮ್ಮಸ್ಸಿನಲ್ಲಿ ಕಾಂಗ್ರೆಸ್ ಪಕ್ಷ ಸರಣಿ ರ್ಯಾಲಿಗಳನ್ನು ಆಯೋಜಿಸುವ ಯೋಜನೆಯಲ್ಲಿದೆ.

ಸ್ವಾತಂತ್ರ್ಯದ 75 ನೇ ವರ್ಷಾಚರಣೆ ಮತ್ತು ಭಾರತ್ ಜೋಡೋ ಯಾತ್ರೆಯ ಅಂಗವಾಗಿ ರಾಜ್ಯಾದ್ಯಂತ 'ಸ್ವತಂತ್ರೋತ್ಸವ ಅಮೃತೋತ್ಸವ ಪಾದಯಾತ್ರೆ' ಸೇರಿದಂತೆ ಸರಣಿ ರ್ಯಾಲಿಗಳನ್ನು ಕಾಂಗ್ರೆಸ್ ಆಯೋಜಿಸುತ್ತಿದೆ. ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಸೆಪ್ಟೆಂಬರ್‌ನಲ್ಲಿ ರಾಜ್ಯಕ್ಕೆ ಆಗಮಿಸುತ್ತಿದ್ದು, 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷಕ್ಕೆ ಮತ್ತಷ್ಟು ಹುರುಪು ನೀಡುವ ನಿರೀಕ್ಷೆಯಿದೆ.

ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕಲ್ಪನೆಯ ಕೂಸು ಆಗಿದ್ದರೂ, ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮತ್ತು ಮಾಲೂರು ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ ಆರಂಭಿಸಿದ ಕಾರ್ಯಕ್ರಮಗಳು ಮತ್ತು 2018 ರ ವಿಧಾನಸಭಾ ಚುನಾವಣೆಯಲ್ಲಿ ಸೋತ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾಗವಹಿಸಿ ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. 

ಈ ಹಿಂದೆ ಸಿಎಂ ಅಭ್ಯರ್ಥಿ ವಿಚಾರವಾಗಿ ಪರಸ್ಪರ ಶೀಥಲಸಮರವನ್ನೇ ನಡೆಸಿದ್ದ ಸಿದ್ದು-ಡಿಕೆ ರಾಹುಲ್ ಗಾಂಧಿ ಮಧ್ಯಪ್ರವೇಶದ ನಂತರ ಉಭಯ ನಾಯಕರು ಒಂದು ಮಟ್ಟಿಗೆ ತಿದ್ದಿಕೊಂಡಿದ್ದಾರೆ ಎನ್ನುವುದನ್ನು ಭಾನುವಾರ ಮೈಸೂರು ಜಿಲ್ಲೆಯ ಕಾರ್ಯಕ್ರಮ ಸೂಚಿಸುತ್ತದೆ. ಶಿವಕುಮಾರ್ ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 75 ಕಿ.ಮೀ ಪಾದಯಾತ್ರೆ ಆಯೋಜಿಸುವಂತೆ ಪಕ್ಷದ ಮುಖಂಡರಿಗೆ ಸೂಚಿಸಿದ್ದಾರೆ. ಆಗಸ್ಟ್ 15 ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರೋಪ ಸಮಾರಂಭಕ್ಕೆ ಜನರನ್ನು ಸಜ್ಜುಗೊಳಿಸಲು ಕೆಲವು ನಾಯಕರು ಈಗಾಗಲೇ ಕಳೆದ ಒಂದು ವಾರದಿಂದ ಸಂಬಂಧಿತ ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದಾರೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮವು ರಾಜ್ಯಾದ್ಯಂತ 1 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸುವ ನಿರೀಕ್ಷೆಯಿದೆ.

ಅಂತೆಯೇ ಡಿಕೆ ಶಿವಕುಮಾರ್ ಅವರ ಬೆಂಬಲಿಗರು ಕುಣಿಗಲ್ ಶಾಸಕ ಡಾ.ರಂಗನಾಥ ಅವರ ಕ್ಷೇತ್ರದಲ್ಲಿ 150 ಕಿಲೋಮೀಟರ್ ಪಾದಯಾತ್ರೆ ನಡೆಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿರೀಕ್ಷೆಯಿದೆ. ಅದೇ ರೀತಿ ರಾಜರಾಜೇಶ್ವರಿನಗರ ವಿಧಾನಸಭಾ ಉಪಚುನಾವಣೆಯಲ್ಲಿ ಪರಾಭವಗೊಂಡ ಕುಸುಮಾ ಹನುಮಂತರಾಯಪ್ಪ ಅವರು ಚುನಾವಣಾ ಪ್ರಚಾರದಂತೆಯೇ ಪಾದಯಾತ್ರೆ ಕೈಗೊಂಡಿದ್ದಾರೆ. "ನಾನು ಮಹಿಳೆಯರಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಿದೆ ಮತ್ತು ಉಡುಗೊರೆಗಳನ್ನು ವಿತರಿಸಿದೆ" ಎಂದು ಅವರು ಹೇಳಿದ್ದಾರೆ.

ಇತ್ತ ರಾಮನಗರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಇಕ್ಬಾಲ್ ಕೂಡ ರ್ಯಾಲಿ ಆರಂಭಿಸಿದ್ದಾರೆ. ಆದರೆ ತುಮಕೂರು ನಗರದಂತಹ ಸ್ಥಳಗಳಲ್ಲಿ, ಟಿಕೆಟ್ ಆಕಾಂಕ್ಷಿಗಳು ಅನೇಕರಿದ್ದು, ಯಾರೂ ಉಪಕ್ರಮವನ್ನು ತೆಗೆದುಕೊಳ್ಳಲು ಸಿದ್ಧರಿಲ್ಲದ ಕಾರಣ ಈ ಭಾಗದಲ್ಲಿ ಕಾಂಗ್ರೆಸ್ ರ್ಯಾಲಿ ಇನ್ನೂ ಟೇಕ್ ಆಫ್ ಆಗಿಲ್ಲ. ಪ್ರವಾಹ ಪೀಡಿತ ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಲ್ಲ ಕಡೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಪಾದಯಾತ್ರೆ ನಾಯಕರು ತಮ್ಮ ಮತದಾರರೊಂದಿಗೆ ನೇರವಾಗಿ ಸಂಪರ್ಕ ಸಾಧಿಸಲು ಸಹಾಯ ಮಾಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com