ಬೆಂಗಳೂರು: ಲಕ್ಷಾಂತರ ಜನರ ತ್ಯಾಗ, ಬಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಇಂದು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿ ಟ್ವೀಟ್ ಮಾಡಿದ ಮಾಜಿ ಸಿಎಂ, ಸ್ವಾತಂತ್ರ್ಯ ಲಭಿಸಿ ಇಂದಿಗೆ ೭೫ ವರ್ಷಗಳು ಕಳೆದಿವೆ. ನಮಗೆ ದಕ್ಕಿರುವ ಈ ಸ್ವಾತಂತ್ರ್ಯವನ್ನು ಸದುಪಯೋಗಪಡಿಸಿಕೊಳ್ಳುವತ್ತ ನಮ್ಮೆಲ್ಲರ ಚಿಂತನೆಗಳು ಒಗ್ಗೂಡಲಿ ಎಂದಿದ್ದಾರೆ.
ಇಂದು ನನ್ನ ನಿವಾಸದೆದುರು ದ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನದ ಶುಭ ಕೋರಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Advertisement