ಬೆಂಗಳೂರು: ಸರ್ಕಾರ ನಡೀತಾ ಇಲ್ಲ. ನಾವು ಹೇಗೂ ಮ್ಯಾನೇಜ್ ಮಾಡಿಕೊಂಡು ಹೋಗುತ್ತಿದ್ದೇವೆ ಎಂಬ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಹೇಳಿಕೆಯಿಂದ ಮುಜುಗರಕ್ಕೊಳಗಾಗಿರುವಂತೆಯೇ, ಅದನ್ನು ವಿಭಿನ್ನ ಅರ್ಥದಲ್ಲಿ ಹೇಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳುವ ಮೂಲಕ ಡ್ಯಾಮೇಜ್ ಕಂಟ್ರೋಲ್ ಗೆ ಪ್ರಯತ್ನಿಸಿದ್ದಾರೆ.
ಜೆ. ಸಿ. ಮಾಧುಸ್ವಾಮಿ ಅವರ ಹೇಳಿಕೆಯಿಂದ ಅಸಮಾಧಾನಗೊಂಡಿರುವ ಇತರ ಸಚಿವರೊಂದಿಗೂ ಮಾತುಕತೆ ನಡೆಸಿದ್ದೇನೆ. ಅವರು ಬಹಿರಂಗವಾಗಿ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದರು. ಕಾನೂನು ಸಚಿವರು ರಾಜೀನಾಮೆ ನೀಡುವಂತೆ ತೋಟಗಾರಿಕೆ ಸಚಿವ ಮುನಿರತ್ನ ಸಲಹೆ ನೀಡುವುದರೊಂದಿಗೆ ಮಾಧುಸ್ವಾಮಿ ಅವರ ಹೇಳಿಕೆಗೆ ಕೆಲ ಸಚಿವರಿಂದ ಟೀಕೆ ವ್ಯಕ್ತವಾಗಿತ್ತು.
ಮಾಧುಸ್ವಾಮಿ ವಿಭಿನ್ನ ಅರ್ಥದಲ್ಲಿ ಹೇಳಿದ್ದಾರೆ. ಅವರೊಂದಿಗೆ ಮಾತನಾಡಿದ್ದೇನೆ. ಅವರ ಹೇಳಿಕೆ ವಿಭಿನ್ನವಾಗಿರುವುದರಿಂದ ತಪ್ಪಾಗಿ ಅರ್ಥೈಸುವ ಅಗತ್ಯವಿದೆ. ಸಹಕಾರ ವಿಷಯಕ್ಕೆ ಸಂಬಂಧಿಸಿದಂತೆ ಅವರು ಮಾತನಾಡಿದ್ದಾರೆ. ಎಲ್ಲವೂ ಸರಿಯಿದೆ. ಯಾವುದೇ ತೊಂದರೆ ಇಲ್ಲ ಎಂದು ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು.
ಮಾಧುಸ್ವಾಮಿ ಅವರ ಹೇಳಿಕೆಯಿಂದ ಬೇಸರಗೊಂಡಿರುವ ಸಚಿವರೊಂದಿಗೆ ಮಾತನಾಡುತ್ತೇನೆ ಎಂದರು. ಮಾಧುಸ್ವಾಮಿ ಮತ್ತು ಚೆನ್ನಪಟ್ಟಣ ಮೂಲದ ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ನಡುವಿನ ಆಡಿಯೋ ಇತ್ತೀಚಿಗೆ ವೈರಲ್ ಆಗಿತ್ತು.
Advertisement